ಸುದ್ದಿ ಕಣಜ.ಕಾಂ | CITY | CRIME
ಶಿವಮೊಗ್ಗ: ತುಂಗಾ ನದಿಯ ದಡದಲ್ಲಿರುವ ಮೌನೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಲಾಗಿದ್ದು, ಅಂದಾಜು 80 ಸಾವಿರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಲಾಗಿದೆ.
ದೇವಸ್ಥಾನದ ಬೀಗ ಮುರಿದು ಕೃತ್ಯ ಎಸಗಿದ್ದು, ದೇವಸ್ಥಾನದ ಕಟ್ಟಡ ನಿರ್ಮಾಣಕ್ಕಾಗಿ ಸಂಗ್ರಹಿಸಿ ಇಡಲಾಗಿದ್ದ 50 ಸಾವಿರ ರೂಪಾಯಿ ನಗದು, ಹುಂಡಿಯಲ್ಲಿದ್ದ 4 ಸಾವಿರ ರೂಪಾಯಿ, ಅಂದಾಜು 26 ಸಾವಿರ ರೂಪಾಯಿ ಮೌಲ್ಯದ ಚಿನ್ನದ ಕಣ್ಣುಗಳು, ಮೂಗುತಿಗಳನ್ನು ಕಳವು ಮಾಡಲಾಗಿದೆ.
ದೇವಸ್ಥಾನಕ್ಕೆ ಬೀಗ ಹಾಕಿ ಹೋದಾಗ ನಡೀತು ಘಟನೆ
ದೇವಸ್ಥಾನದ ಆಡಳಿತ ಮಂಡಳಿಯವರು ಪೂಜೆ ಮುಗಿಸಿ ದೇವಸ್ಥಾನಕ್ಕೆ ಬೀಗ ಹಾಕಿ ಹೋಗಿದ್ದಾಗ ಆನಂತರ ಬೀಗ ಮುರಿದು ರಾತ್ರಿ ವೇಳೆ ಕೃತ್ಯ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.