ಸುದ್ದಿ ಕಣಜ.ಕಾಂ | KARNATAKA | POLITICS
ಶಿವಮೊಗ್ಗ: ಅತ್ಯಾಚಾರಿಗಳಿಗೆ ಭಯ ಹುಟ್ಟುವ ಕಾನೂನು ಜಾರಿಗೆ ತರಲಾಗುವುದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಲಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಮೈಸೂರು ವಿದ್ಯಾರ್ಥಿನಿ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು,
ಅತ್ಯಾಚಾರಿಗಳ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳಲು ಕಾನೂನಿಗೆ ತಿದ್ದುಪಡಿ ತರುವ ಅವಶ್ಯಕತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ಕಠಿಣ ಕಾನೂನಿಗಾಗಿ ಬೇಡಿಕೆ ಇಡಲಾಗಿತ್ತು. ಆದರೆ, ಯಾವ ಪ್ರಯೋಜನವಾಗಿಲ್ಲ. ಬಿಜೆಪಿ ಅಧಿಕಾರದ ಅವಧಿಯಲ್ಲಿ ವಿಶೇಷ ಕಾನೂನು ರಚಿಸಿ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.