ಸುದ್ದಿ ಕಣಜ.ಕಾಂ | KARNATAKA | RAILWAY
ಶಿವಮೊಗ್ಗ: ಕೋವಿಡ್ ರೋಗದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ಶಿವಮೊಗ್ಗ-ಬೆಂಗಳೂರು, ಶಿವಮೊಗ್ಗ-ಮೈಸೂರು ರೈಲು ಪುನರಾರಂಭಗೊಂಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
https://www.suddikanaja.com/2020/11/21/railway-coaching-depot-at-koteganguru/
ಕಾಯಿಲೆಯಿಂದಾಗಿ ಶಿವಮೊಗ್ಗದಿಂದ ಹೊರಡುತಿದ್ದ ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಆದರೀಗ ಅವುಗಳನ್ನು ಪುನರಾರಂಭಿಸಲಾಗುತ್ತಿದೆ. ಇದರಿಂದ ಪ್ರಯಾಣಿಕರಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದ್ದಾರೆ.
ಯಾವ ರೈಲುಗಳು ಯಾವಾಗಿಂದ ಶುರು?
ತಾಳಗುಪ್ಪ-ಶಿವಮೊಗ್ಗ ಟೌನ್-ತಾಳಗುಪ್ಪ ಪ್ಯಾಸೆಂಟರ್ ರೈಲಿನ ಸೇವೆಯನ್ನು ಸೆಪ್ಟೆಂಬರ್ 1 ರಿಂದ ಆರಂಭಿಸಲಾಗುತ್ತಿದೆ. ಯಶವಂತಪುರ- ಶಿವಮೊಗ್ಗ- ಯಶವಂತಪುರ ವಾರಕ್ಕೆ 3 ದಿನ ಸಂಚರಿಸುವ ಎಕ್ಸ್ ಪ್ರೆಸ್ ಸೇವೆಯನ್ನು (ಸೋಮವಾರ, ಬುಧವಾರ ಮತ್ತು ಶನಿವಾರ) ಅಕ್ಟೋಬರ್ 12 ರಿಂದ ಪುನರಾರಂಭ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
https://www.suddikanaja.com/2021/02/10/railway-parcel-service-from-talaguppa-railway-station/
ಶಿವಮೊಗ್ಗ- ತಾಳಗುಪ್ಪ ನಡುವಿನ ಅರಸಾಳು ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ವಿಸ್ತರಣಾ ಕಾಮಗಾರಿಯು 2020ರ ಜನವರಿಯಲ್ಲಿ ಲೋಕಾರ್ಪಣೆ ಮಾಡಲಾಗಿದ್ದು, ಈಗ 24 ಕೋಚ್ ಗಳ ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಬೇಕಾದ ಮೂಲಸೌಕರ್ಯವನ್ನು ಹೊಂದಿರುತ್ತದೆ. ಮೈಸೂರು-ತಾಳಗುಪ್ಪ-ಮೈಸೂರು ಎಕ್ಸ್ಪ್ರೆಸ್ ರೈಲು 2021ರ ಸೆ.1 ರಿಂದ ಈ ನಿಲ್ದಾಣದಲ್ಲಿ ನಿಲುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.
ಶಿವಮೊಗ್ಗ -ಯಶವಂತಪುರ-ಶಿವಮೊಗ್ಗ ಜನಶತಾಬ್ದಿ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಈಗಾಗಲೇ ಸಂಸದರ, ಒತ್ತಾಸೆಯಿಂದ ಬೆಂಗಳೂರು ನಗರ ನಿಲ್ದಾಣದವರೆಗೆ ವಿಸ್ತರಿಸಲಾಗಿದೆ. ಮೈಸೂರು-ಬೆಂಗಳೂರು-ತಾಳಗುಪ್ಪ ಎಕ್ಸ್ಪ್ರೆಸ್ ಬೆಳಗ್ಗೆ 4 ಗಂಟೆಗೆ ತಲುಪುತಿದ್ದು, ಪ್ರಯಾಣಿಕರಿಗೆ ಅನಾನುಕೂಲವಾಗುತ್ತಿತ್ತು. ಶಿವಮೊಗ್ಗದಲ್ಲಿ ಈ ರೈಲು ಬೆಳಗ್ಗೆ 5 ಗಂಟೆಗೆ ಆಗಮಿಸುವಂತೆ ವೇಳಾಪಟ್ಟಿಯಲ್ಲಿ ಮಾರ್ಪಾಡು ಮಾಡಲಾಗಿದೆ.
ತಾಳಗುಪ್ಪ- ಶಿವಮೊಗ್ಗ- ಬೆಂಗಳೂರು ಎಕ್ಸ್ಪ್ರೆಸ್ ಸೇವೆಯು ಬೆಂಗಳೂರು ನಗರ ನಿಲ್ದಾಣಕ್ಕೆ 4 ಗಂಟೆಗೆ ತಲುಪುತ್ತಿದ್ದದ್ದು ಈಗ 5 ಗಂಟೆಗೆ ಆಗಮಿಸುವಂತೆ ಮಾಡಲಾಗಿದೆ.
https://www.suddikanaja.com/2020/12/05/train-restart-from-shivamogga-after-covid/