ಸುದ್ದಿ ಕಣಜ.ಕಾಂ | CITY | CRIME
ಶಿವಮೊಗ್ಗ: ಸೀರೆಯ ಜೋಕಾಲಿಯು ಕೊರಳಿಗೆ ಸುತ್ತಿಕೊಂಡ ಪರಿಣಾಮ ಬಾಲಕ ಮೃತಪಟ್ಟಿದ್ದಾನೆ.
ಭದ್ರಾವತಿ ತಾಲೂಕು ಅರಹತೊಳಲು ಗ್ರಾಮದ ಭರತ್(12) ಮೃತಪಟ್ಟಿದ್ದಾನೆ.
ಹಲ್ಲು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಬಂದಾಗ ಘಟನೆ
ಹಲ್ಲು ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಬಂದಿದ್ದು, ಈ ವೇಳೆ ಜಯನಗರದ ಅತ್ತೆಯ ಮನೆಗೆ ಹೋಗಿದ್ದಾರೆ. ಆಗ ಮನೆಯ ಅಂಗಳದಲ್ಲಿ ಕಟ್ಟಿದ್ದ ಸೀರೆಯ ಜೋಕಾಲಿಯಲ್ಲಿ ಬಾಲಕ ಆಟವಾಡುತಿದ್ದ. ಸೀರೆಯು ಕೊರಳಿಗೆ ಸುತ್ತಿಕೊಂಡಿದ್ದು, ಬಾಲಕ ಮಂಡಿಯೂರಿದ ಸ್ಥಿತಿಯಲ್ಲೇ ಮೃತಪಟ್ಟಿದ್ದಾನೆ.
ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.