ಸುದ್ದಿ ಕಣಜ.ಕಾಂ | NATIONAL | POLITICS
ಬೆಂಗಳೂರು: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ತೆಲಗು ಭಾಷೆಯಲ್ಲಿ ಟ್ವಿಟ್ ಮಾಡಿದ್ದು, ಕನ್ನಡಿಗರು ಅದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅವಧಿಯಲ್ಲಿ ಕೃಷಿ ಉತ್ಪನ್ನ ಮತ್ತು ರೈತರ ಆದಾಯ ಏರಿಕೆ ಆಗಿದ್ದು, ಅವರು ತಮ್ಮ ಅಧಿಕೃತ ಖಾತೆಯಲ್ಲಿ ಅಭಿನಂದಿಸಿದ್ದಾರೆ. ಆದರೆ, ಇದನ್ನು ತೆಲಗುದಲ್ಲಿ ಟ್ವಿಟ್ ಮಾಡಿದ್ದಕ್ಕೆ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನ್ನಡದಲ್ಲಿ ಟ್ವಿಟ್ ಮಾಡುವಂತೆ ಕೋರಿದ್ದಾರೆ.