ಸುದ್ದಿ ಕಣಜ.ಕಾಂ | KARNATAKA | POLITICS
ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತವರು ಕ್ಷೇತ್ರಕ್ಕೆ ಆಗಮಿಸಿದ್ದು, ರೆಸ್ಟ್ ಮೂಡ್ ನಲ್ಲಿದ್ದಾರೆ. ಸಾಮಾನ್ಯವಾಗಿ ಶಿವಮೊಗ್ಗಕ್ಕೆ ಬಂದಾಗ ಬಿ.ಎಸ್.ವೈ ಅವರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತಿದ್ದರು. ಈ ಸಲ ಕುಟುಂಬದೊಂದಿಗ ಸಮಯ ಕಳೆಯುತಿದ್ದಾರೆ.
https://www.suddikanaja.com/2021/01/25/action-against-illegal-slaughterhouse-in-shivamogga/
ಬೆಳಗ್ಗೆ ವಿನೋಬ ನಗರದಲ್ಲಿರುವ ಯಡಿಯೂರಪ್ಪ ಅವರ ಮನೆಗೆ ಸಚಿವ ಕೆ.ಎಸ್.ಈಶ್ವರಪ್ಪ ಭೇಟಿ ನೀಡಿದ್ದು, ಅಲ್ಲಿಯೇ ಉಪಹಾರ ಕೂಡ ಸೇವಿಸಿದ್ದಾರೆ. ಈ ಹಿಂದೆಲ್ಲ ಯಡಿಯೂರಪ್ಪ ಅವರು ನಿರಂತರ ಕಾರ್ಯಕ್ರಮಗಳಿಂದಾಗಿ ಮೀನಾಕ್ಷಿ ಭವನದಲ್ಲಿ ಉಪಹಾರ ಸೇವಿಸುತ್ತಿದ್ದರು. ಆದರೆ, ಈ ಸಲ ಮನೆಯಲ್ಲಿಯೇ ಇದ್ದರು.
ಅಭಿವೃದ್ಧಿಯ ಕುರಿತು ಚರ್ಚೆ
ಯಡಿಯೂರಪ್ಪ ಹಾಗೂ ಈಶ್ವರಪ್ಪ ಅವರ ನಡುವೆ ಜಿಲ್ಲೆಯ ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚಿಸಿದರು. ಯಡಿಯೂರಪ್ಪರನ್ನು ಭೇಟಿಯಾಗಿ ತಮ್ಮ ಬೇಡಿಕೆ ಈಡೇರಿಸುವಂತೆ ಸಿಮ್ಸ್ ನ ಗುತ್ತಿಗೆ ನೌಕರರು ಆಗಮಿಸಿದ್ದರು. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.
ಹಿಂದೆ ಸಿಎಂ ಆಗಿದ್ದ ಯಡಿಯೂರಪ್ಪ ಅವರು ಗ್ರಾಮಿಣಾಭಿವೃದ್ಧಿ ಇಲಾಖೆ ಅನುದಾನವನ್ನು ತಮ್ಮ ಗಮನಕ್ಕೆ ತರದೇ ಹಂಚಿಕೆ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ರಾಜ್ಯಪಾಲರಿಗೆ ಈಶ್ವರಪ್ಪ ಪತ್ರ ಬರೆದಿದ್ದರುಮಈ ಘಟನೆಯ ನಂತರ ಇಬ್ಬರ ನಡುವಿನ ಸಂಬಂಧ ಅಷ್ಟಕ್ಕಷ್ಟೆ. ಈಗ ಉಭಯ ನಾಯಕರ ಭೇಟಿ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
https://www.suddikanaja.com/2021/03/09/huge-explosive-found-in-shivamogga/