ಸುದ್ದಿ ಕಣಜ.ಕಾಂ | DISTRICT | SHIVAMOGGA AIRPORT
ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ವಿಮಾನ ನಿಲ್ದಾಣ, ಸಿಗಂದೂರು ಸೇತುವೆ ಸೇರಿದಂತೆ ವಿವಿಧ ಕಾಮಗಾರಿಗಳ ಭೌತಿಕ ಪರಿಶೀಲನೆಗಾಗಿ ದಿನಾಂಕ ನಿಗದಿಯಾಗಿದೆ.
ನಗರದ ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ ಮಾತನಾಡಿದರು.
https://www.suddikanaja.com/2021/01/02/shivamogga-airport-work-will-compete-in-2021/
ಜಿಲ್ಲೆಯಲ್ಲಿ ಕೈಗೊಂಡಿರುವ ವಿಮಾನ ನಿಲ್ದಾಣ, ಸಿಗಂಧೂರು ಸೇತುವೆ, ವರ್ತುಲ ರಸ್ತೆ, ರೈಲ್ವೆ ಮೇಲ್ಸೇತುವೆ, ಪ್ರವಾಸಿ ತಾಣಗಳ ಅಭಿವೃದ್ಧಿ ಸೇರಿದಂತೆ ಪ್ರಮುಖ ಯೋಜನೆಗಳ ಪ್ರಗತಿ ಪರಿಶೀಲನೆಗಾಗಿ ಕರೆದಿದ್ದ ಸಭೆಯಲ್ಲಿ ಕಾಮಗಾರಿಗಳ ಗುಣಮಟ್ಟ ಪರಿಶೀಲನೆಗೋಸ್ಕರ ಸೆಪ್ಟಂಬರ್ 18ರಂದು ಚುನಾಯಿತ ಪ್ರತಿನಿಧಿಗಳು ಹಾಗೂ ಸಂಬಂಧಿತ ಇಲಾಖೆಯ ಅಧಿಕಾರಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸುವುದಾಗಿ ತಿಳಿಸಿದರು.
ವಿಮಾನ ನಿಲ್ದಾಣದಲ್ಲಿ ರನ್ ವೇ ನಿರ್ಮಾಣ ಮತ್ತು ಕಟ್ಟಡ ಕಾಮಗಾರಿಗಳು ಭರದಿಂದ ಸಾಗಿವೆ. ಎರಡನೇ ಹಂತದ ಕಾಮಗಾರಿಗಳು ಆರಂಭಗೊಂಡಿವೆ. ವಿಶೇಷವಾಗಿ ಈ ಕಾಮಗಾರಿಗೆ ಯಾವುದೇ ಹಣಕಾಸಿನ ಅಡಚಣೆ ಆಗದಂತೆ ಕ್ರಮವಹಿಸಲಾಗುವುದು. ಕೈಗೊಂಡ ಕಾಮಗಾರಿಗಳನ್ನು ಕಾಲ ಮಿತಿಯಲ್ಲಿ ಪೂರ್ಣಗೊಳಿಸಲು ಅಗತ್ಯವಾಗಿರುವ ಅನುದಾನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಪರಿಹಾರ ಧನ ವಿತರಣೆಗೆ ಕ್ರಮ
ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ಧನ ಬಿಡುಗಡೆಯಾಗಿದ್ದು, ಅರ್ಹ ರೈತರು ದಾಖಲಾತಿಗಳನ್ನು ಒದಗಿಸಿದಲ್ಲಿ ಪರಿಹಾರ ಧನ ವಿತರಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಸಚಿವರಿಗೆ ತಿಳಿಸಿದರು.
ಶಿವಮೊಗ್ಗ ರೈಲ್ವೆ ನಿಲ್ದಾಣದ ವರ್ತುಲ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ರೈಲ್ವೇ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ಕುರಿತು ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದಲ್ಲದೆ ಪೇಯ್ಡ್ ಆಟೋ ಕೌಂಟರ್, ಏಕಮುಖ ಸಂಚಾರಕ್ಕೆ ಗಮನಹರಿಸಲಾಗುವುದು ಎಂದರು.
ಸಭೆಯಲ್ಲಿ ಶಾಸಕರಾದ ಹರತಾಳು ಹಾಲಪ್ಪ, ಕೆ.ಬಿ.ಅಶೋಕ್ ನಾಯ್ಕ್, ರುದ್ರೇಗೌಡ, ಜಿಲ್ಲಾ ಪಂಚಾಯಿತಿ ಸಿಇಒ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ, ಕೃಷಿ ಮತ್ತು ತೋಟಗಾರಿಕೆ ವಿವಿ. ಕುಲಪತಿ ಡಾ. ಎಂ.ಕೆ.ನಾಯಕ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/01/18/new-kendriya-vidyalaya-start-in-shivamogga/