ಸುದ್ದಿ ಕಣಜ.ಕಾಂ | DISTRICT | LABOR
ಶಿವಮೊಗ್ಗ: ಸೆಪ್ಟೆಂಬರ್ 16ರ ವರೆಗೆ ಕಾರ್ಮಿಕ ಅದಾಲತ್ ನಡೆಯಲಿದ್ದು, ಇದರ ಸೌಲಭ್ಯ ಪಡೆಯಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ವಿಶ್ವನಾಥ್ ತಿಳಿಸಿದರು.
ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆಯೋಜಿಸಿದ್ದ ಕಾರ್ಮಿಕ ಅದಾಲತ್ ಕಾರ್ಯಕ್ರಮದಲ್ಲಿ ಮಾತನಾಡಿದರು.
https://www.suddikanaja.com/2021/07/10/compensation-to-labors/
ಕಾರ್ಮಿಕ ಇಲಾಖೆ, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ, ಕುಟುಂಬ ಪಿಂಚಣಿ ಸೌಲಭ್ಯ, ಕಾರ್ಮಿಕ ಗೃಹ ಭಾಗ್ಯದಡಿಯಲ್ಲಿ ವಸತಿ ಸೌಲಭ್ಯ, ಅಂತ್ಯಕ್ರಿಯೆ ವೆಚ್ಚ, ಫಲಾನುಭವಿಗಳ ಇಬ್ಬರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಸಹಾಯ ಧನ, ಮದುವೆ ಸಹಾಯ ಧನ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುತ್ತಿದೆ ಎಂದರು.
ಅರ್ಹ ಫಲಾನುಭವಿಗಳು ಸೂಕ್ತ ದಾಖಲೆಗಳನ್ನು ಒದಗಿಸುವ ಮೂಲಕ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಆಗಸ್ಟ್ 16ರಿಂದ ಸೆಪ್ಟಂಬರ್ 16ರ ವರೆಗೆ ಬೆಳಗ್ಗೆ 10.30ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಕಾರ್ಮಿಕ ಅದಾಲತ್ ನಡೆಯಲಿದೆ. ಕಾರ್ಮಿಕರು ಸೂಕ್ತ ದಾಖಲೆ, ಸ್ವೀಕೃತಿ ಪತ್ರದೊಂದಿಗೆ ತಮ್ಮ ಬ್ಯಾಂಕ್ ಖಾತೆ ವಿಲೀನವಾದಲ್ಲಿ ಹೊಸ ಬ್ಯಾಂಕ್ ಖಾತೆ ವಿವರಗಳೊಂದಿಗೆ ಹತ್ತಿರದ ಕಾರ್ಮಿಕ ಇಲಾಖೆಯ ಆಯಾ ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗಳಿಗೆ ಅಥವಾ ಜಿಲ್ಲಾ ಕಾರ್ಮಿಕರ ಅಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಇದರ ಸದುಪಯೋಗ ಪಡೆದುಕೊಳ್ಳಬಹುದು ಎಂದು ಹೇಳಿದರು.
https://www.suddikanaja.com/2020/12/16/lok-adalat-in-shivamogga/
ಕಾರ್ಮಿಕ ಅದಾಲತ್ ಗೆ ಹಸಿರು ನಿಶಾನೆ
ಅದಾಲತ್ ಗೆ ಚಾಲನೆ ನೀಡಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಎಸ್.ಎ.ಮುಸ್ತಫಾ ಹುಸೇನ್, ಕಾರ್ಮಿಕರ ಸಮಸ್ಯೆ ಪರಿಹರಿಸಲು, ವಿವಿಧ ಸೌಲಭ್ಯಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಮತ್ತು ಕೋವಿಡ್ ಪರಿಹಾರಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಲು ಜಿಲ್ಲೆಯಾದ್ಯಂತ ಕಾರ್ಮಿಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಕಾರ್ಮಿಕರು ಪ್ರಯೋಜನ ಪಡೆದುಕೊಳ್ಳಬೇಕೆಂದು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸರಸ್ವತಿ, ನ್ಯಾಯಾಧೀಶರು, ಕಾರ್ಮಿಕ ಇಲಾಖೆ ಸಿಬ್ಬಂದಿ, ಕಾರ್ಮಿಕರು ಉಪಸ್ಥಿತರಿದ್ದರು.
https://www.suddikanaja.com/2020/12/28/tunga-bhadra-sugar-factory-workers-demands/