ಸುದ್ದಿ ಕಣಜ.ಕಾಂ | KARNATAKA | RELIGION
ಶಿವಮೊಗ್ಗ: ಲಿಂಗಾಯತ ಪಂಚಮಸಾಲಿ, ಗೌಡ ಲಿಂಗಾಯತ, ಮಲೆಗೌಡ, ದೀಕ್ಷಾ ಲಿಂಗಾಯತರುಗಳಿಗೆ 2ಎ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ನೀಡುವಂತೆ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.
https://www.suddikanaja.com/2021/04/04/nolamba-samaja-program/
ಶಿವಮೊಗ್ಗದಲ್ಲಿ ಗುರುವಾರ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆಪ್ಟೆಂಬರ್ 30ರೊಳಗೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಉಗ್ರ ಹೋರಾಟ ಮಾಡಿವುದು ಅನಿವಾರ್ಯ ಆಗಲಿದೆ ಎಂದು ಹೇಳಿದರು.
2ಎ ಮೀಸಲಾತಿಗಾಗಿ ಕಳೆದ ಜನವರಿ 14ರಿಂದ ಕೂಡಲ ಸಂಗಮದಿಂದ ಬೆಂಗಳೂರಿನ ವಿಧಾನಸೌಧದವರೆಗೆ 31 ದಿನ ಪಾದಯಾತ್ರೆ ಮಾಡಲಾಗಿದೆ. ನಂತರ ಹುಬ್ಬಳ್ಳಿ ಸಮಾವೇಶ ಹಾಗೂ ಬೆಂಗಳೂರಿನಲ್ಲಿ 23 ದಿನ ನಿರಂತರ ಧರಣಿ ಮಾಡಲಾಗಿದೆ. ಹೀಗೆ ನಾನಾ ಹಂತದ ಹೋರಾಟ ಮಾಡಿದರೂ ಸರ್ಕಾರ ಇದರೆಡೆಗೆ ಗಮನ ಹರಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಶಿವಮೊಗ್ಗದಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣಕ್ಕೆ ಶಿವಪ್ಪ ನಾಯಕ, ಬಸ್ ನಿಲ್ದಾಣಕ್ಕೆ ಕೆಳದಿ ಚನ್ನಮ್ಮ, ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಬಸವಣ್ಣನವರ ಹೆಸರು ಇಡಿ.
– ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠ
ಸದನದಲ್ಲಿ ಘೋಷಿಸದಿದ್ದರೆ ಅ.1ರಿಂದ ಹೋರಾಟ
ಸದನದಲ್ಲಿ ಸೆಪ್ಟೆಂಬರ್ 15ರೊಳಗೆ ಮೀಸಲಾತಿ ಪ್ರಕಟಿಸುವ ಭರವಸೆ ನೀಡಬೇಕು. ಈ ಗಡುವಿನಗೊಳಗೆ ಬೇಡಿಕೆ ಈಡೇರಿಸದಿದ್ದರೆ ಅಕ್ಟೋಬರ್ 1ರಿಂದ ನಾನಾ ಹಂತದ ಹೋರಾಟ ರೂಪಿಸಲಾಗುವುದು ಎಂದರು.
‘ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಬೃಹತ್ ರಾಜ್ಯ ಅಭಿಯಾನ’ವು ಆಗಸ್ಟ್ 26ರಿಂದ ಮಲೆಮಹದೇಶ್ವರ ಬೆಟ್ಟದಿಂದ ಆರಂಭಿಸಲಾಗುವುದು. ಅಕ್ಟೋಬರ್ 1ರ ವರೆಗೆ ರಾಜ್ಯದಾದ್ಯಂತ ನಡೆಯುತ್ತಿದೆ. ಸೆ.3ರಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿ, ಸೊರಬ, ಶಿಕಾರಿಪುರ, ಸಾಗರದಲ್ಲಿ ಕೂಡ ಮುಂದುವರೆಯಲಿದೆ ಎಂದರು.
ಪ್ರಮುಖರಾದ ಎಚ್.ವಿ. ಮಹೇಶ್ವರಪ್ಪ, ಎಚ್.ಎಂ. ಚಂದ್ರಶೇಖರಪ್ಪ, ಮಲ್ಲೇಶಪ್ಪ, ನಟರಾಜ್, ಶಿವಣ್ಣ, ಕುಮಾರ್ ಉಪಸ್ಥಿತರಿದ್ದರು.
https://www.suddikanaja.com/2020/11/23/akhil-bharatiya-veerashaiva-mahasabha-requested-byr-2/