ಸುದ್ದಿ ಕಣಜ.ಕಾಂ | DISTRICT | CHARAK
ಶಿವಮೊಗ್ಗ: ನಗರದ ದುರ್ಗಿಗುಡಿಯಲ್ಲಿರುವ ಕಟೀಲ್ ಅಶೋಕ್ ಪೈ ಮೆಮೋರಿಯಲ್ ಇನ್ ಸ್ಟಿಟ್ಯೂಟ್ ನಲ್ಲಿ ಸೆಪ್ಟೆಂಬರ್ 6ರಿಂದ ಒಂದು ತಿಂಗಳು ‘ಪವಿತ್ರ ವಸ್ತ್ರ ಅಭಿಯಾನ’ ಕೈ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಹಮ್ಮಿಕೊಳ್ಳಲಾಗಿದೆ.
https://www.suddikanaja.com/2021/08/02/belur-gopalkrishna-furious-statement-on-karnataka-state-government/
ಸಾಗರ ತಾಲ್ಲೂಕಿನ ಭೀಮನಕೋಣೆಯ ಚರಕ ಮಹಿಳಾ ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದಿಂದ ಅಭಿಯಾನ ನಡೆಯಲಿದೆ ಎಂದು ಸಂಘದ ಕಾರ್ಯದರ್ಶಿ ಪ್ರತಿಭಾ ರಾಘವೇಂದ್ರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.
ಮೊದಲ ದಿನ ಸಂಜೆ 6 ರಿಂದ ರಾತ್ರಿ 10 ಗಂಟೆಯವರೆಗೆ ಹಾಗೂ 7 ರಂದು ಬೆಳಗ್ಗೆ 10 ರಿಂದ ಸಂಜೆ 6ರ ವರೆಗೆ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಇದೆ ಎಂದರು.
ಸರ್ಕಾರ ನೀಡಿದ್ದ ಹಣ ವಾಪಸ್
ಸಂಘದ ಸಾಧನೆ ಗುರುತಿಸಿ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ₹33 ಲಕ್ಷ ಅನುದಾನ ಘೋಷಣೆ ಮಾಡಿತ್ತು. 3 ವರ್ಷಗಳ ಹಿಂದೆ ಬ್ಯಾಂಕಿಗೆ ಹಣ ಸಂದಾಯ ಕೂಡ ಆಗಿತ್ತು. ಅದನ್ನು ಪಡೆಯಲು ಅಲೆದಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ, ಈ ಹಣವನ್ನು ವಾಪಸ್ ನೀಡಲಾಗಿದೆ. ಸಂಘದಿಂದ ₹60 ಲಕ್ಷ ವೆಚ್ಚದಲ್ಲಿ ಉತ್ಪಾದಿಸಿದ ಉತ್ಪನ್ನಗಳನ್ನು ಮಾರಾಟ ಮಾಡಿ ಹಣ ಮರು ಪಡೆಯಲು ಅಭಿಯಾನದ ಮೂಲಕ ಪ್ರದರ್ಶನ ಹಾಗೂ ಮಾರಾಟ ಮಾಡಲು ಉದ್ದೇಶಿಸಲಾಗಿದೆ ಎಂದರು.
ಸಂಕಷ್ಟದಲ್ಲಿ ಕೈಮಗ್ಗ ಉದ್ಯಮ
ಕೋವಿಡ್ ಮಗ್ಗಗಳು, ಕಾರ್ಯಾಗಾರಗಳು, ಸಣ್ಣ ಕೈಗಾರಿಕೆಗಳನ್ನು ಬಲಿ ಪಡೆದಿದೆ. ಲಕ್ಷಾಂತರ ಮೀಟರ್ ಗಳ ಬಟ್ಟೆ, ಸೀರೆ, ಚಾಪೆ, ಮಡಕೆ ಇತ್ಯಾದಿ ಸುಂದರ ವಸ್ತುಗಳು ಮಾರಾಟವಾಗದೆ ಉಳಿದಿವೆ. ಸರ್ಕಾರ ಸಹಾಯ ಹಸ್ತ ಚಾಚಿಲ್ಲ. ಈ ಉದ್ಯಮದ ಉಳಿವು ಗ್ರಾಹಕರ ಮೇಲಿದೆ ಎಂದರು.
ರಾಜ್ಯದ ಪ್ರಮುಖ ಮಠಗಳು ಸ್ವಾಮೀಜಿಗಳು ಕೈಉತ್ಪನ್ನಗಳನ್ನು ಖರೀದಿಸುವ ವಿಶ್ವಾಸ ನೀಡಿದ್ದಾರೆ ಎಂದು ತಿಳಿಸಿದರು.
ಮಾರುಕಟ್ಟೆ ವ್ಯವಸ್ಥಾಪಕಿ ಪದ್ಮಶ್ರೀ, ಸಾಮಾಜಿಕ ಕಾರ್ಯದರ್ಶಿ ಮಹಾಲಕ್ಷ್ಮಿ, ಸಂಧ್ಯಾ ಕಾವೇರಿ ಉಪಸ್ಥಿತರಿದ್ದರು.
https://www.suddikanaja.com/2021/07/15/ananthnagforpadma-campaign-in-social-media/