ಸುದ್ದಿ ಕಣಜ.ಕಾಂ | KARNATAKA | CRIME
ಬೆಂಗಳೂರು: ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಕಿರು ಸಮಾವೇಶದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಸಣ್ಣಪುಟ್ಟ ಅಪರಾಧ ಚಟುವಟಿಕೆಗಳನ್ನು ಮಾಡಿ ರೌಡಿಶೀಟರ್ ಪಟ್ಟಿ ಸೇರಿರುವವರನ್ನು ಅದರಿಂದಕೈಬಿಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
https://www.suddikanaja.com/2021/08/07/home-minister-portfolio-to-aaraga-jnanedra/
ಈ ಕುರಿತು ಮಾತನಾಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಪುಡಿ ರೌಡಿಗಳು ಸಮಾಜಘಾತುಕ ಕೆಲಸಗಳಲ್ಲಿ ತೊಡಗಿಸಿಕೊಂಡಿಲ್ಲ. ಕಾನೂನು ಭಂಗ ಉಂಟು ಮಾಡಿಲ್ಲ. ಆದರೂ ಅವರಿನ್ನೂ ರೌಡಿಶೀಟರ್ ಪಟ್ಟಿಯಲ್ಲಿದ್ದಾರೆ ಎಂದರು.
READ | ರಾಜ್ಯದಲ್ಲಿ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಚಾಲನೆ
ಆರಗ ಜ್ಞಾನೇಂದ್ರ ಇನ್ನೇನೇನು ಹೇಳಿದರು?
- ಜಾನುವಾರುಗಳನ್ನು ಕಡಿಯುವ ಉದ್ದೇಶಕ್ಕೆ ಸಾಗಣೆ ಮಾಡುವುದಕ್ಕೆ ಬ್ರೇಕ್
- * ಪ್ರತಿ ತಿಂಗಳು ಇನ್ಮುಂದೆ ಸಭೆ ಕಡ್ಡಾಯವಾಗಿ ಮಾಡಬೇಕು
- ಎಫ್.ಐ.ಆರ್. ಆದ ನಿಗದಿತ ಅವಧಿಯೊಳಗೆ ಚಾರ್ಜ್ ಶೀಟ್ ಅನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು
- ಎನ್.ಐ.ಎ(ನ್ಯಾಷನಲ್ ಇನ್ವೆಸ್ಟಿಗೇಶನ್ ಏಜೆನ್ಸಿ) ಘಟಕವನ್ನು ಬೆಂಗಳೂರು ಇಲ್ಲವೇ ಮಂಗಳೂರಿನಲ್ಲಿ ತೆರೆಯಲು ಕೇಂದ್ರಕ್ಕೆ ಶಿಫಾರಸು
- ಬೆಂಗಳೂರಿನಲ್ಲಿರುವ ಅಕ್ರಮ ಕ್ಯಾಸಿನೋ, ಮಟ್ಕಾ ಅವ್ಯವಹಾರಕ್ಕೆ ಆಯಾ ಠಾಣೆ ಅಧಿಕಾರಿಯೇ ರೆಸ್ಪಾನ್ಸ್
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆ ವಹಿಸಿದ್ದರು. ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/08/07/official-announcement-of-portfolio-in-karnataka/