ಸುದ್ದಿ ಕಣಜ.ಕಾಂ | TALUK | EDUCATION
ಸಾಗರ: ಪಟ್ಟಣದ ವನಶ್ರೀ ವಸತಿ ಶಾಲೆಯಲ್ಲಿ ಬುಧವಾರ ನೆಹರೂ ಯುವ ಕೇಂದ್ರ ವತಿಯಿಂದ ವಿಶ್ವ ಸಾಕ್ಷರತಾ ದಿನ ಆಚರಿಸಲಾಯಿತು.
https://www.suddikanaja.com/2021/09/04/haldi-ganesh-competation-in-shivamogga/
ವನಶ್ರೀ ವಸತಿ ಶಾಲೆಯ ಸಂಸ್ಥಾಪಕ ಮಂಜಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಸಾಕ್ಷರತೆ ಮಹತ್ವದ ಬಗ್ಗೆ ಜನರಿಗೆ ತಿಳಿಸುವ ಸಲುವಾಗಿ ಪ್ರತಿ ವರ್ಷ ಸೆಪ್ಟೆಂಬರ್ 8 ರಂದು ವಿಶ್ವ ಸಾಕ್ಷರತಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದರು.
ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ
ಶಿಕ್ಷಣ ಪಡೆಯುವುದರಿಂದ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಸುತ್ತಲಿನ ಪ್ರದೇಶಗಳಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವ ಕೆಲಸವಾಗಬೇಕು. ಅಂತಹ ಮಕ್ಕಳನ್ನು ಗುರುತಿಸಿ ಮುಖ್ಯವಾಹಿನಿಗೆ ತರಲು ಶ್ರಮಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ನೆಹರೂ ಯುವ ಕೇಂದ್ರದ ಸ್ವಯಂ ಸೇವಕಿ ಗಾಯತ್ರಿ ಮಾತನಾಡಿ, ಸಾಕ್ಷರತೆಯು ವ್ಯಕ್ತಿಯೊಬ್ಬ ಘನತೆಯಿಂದ ಬದುಕಲು ಸಹಾಯ ಮಾಡುವುದರ ಜೊತೆಗೆ ಸ್ವಾವಲಂಬಿಯಾಗಲು ಸಹಕರಿಸುತ್ತದೆ ಎಂದರು.
ವಿದ್ಯಾ, ಶೈಲಜಾ, ಮಧು ಉಪಸ್ಥಿತರಿದ್ದರು. ರಶ್ಮಿ ನಾಯರ್ ನಿರೂಪಿಸಿದರು. ಗಿರೀಶ್ ವಂದಿಸಿದರು.
ವರದಿ | ಸೂರಜ್ ನಾಯರ್
https://www.suddikanaja.com/2021/02/23/shivamogga-zilla-panchayat-gb-meeting/