ಸುದ್ದಿ ಕಣಜ.ಕಾಂ | DISTRICT | GANESH FESTIVAL
ಶಿವಮೊಗ್ಗ: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಗಣೇಶ ವಿಸರ್ಜನೆ ಮಾಡಲಾಗುತ್ತಿದೆ. ಮೊದಲ ದಿನ 905 ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ. ಭಾನುವಾರ 1,036 ಸಾರ್ವಜನಿಕ ಗಣಪತಿಗಳ ವಿಸರ್ಜನೆ ಮಾಡಲಾಗಿದೆ. ಅದೇ ರೀತಿ, ಐದನೇ ದಿನ 529 ಮೂರ್ತಿಗಲ ವಿಸರ್ಜನೆ ಆಗಲಿದೆ.
ಜಿಲ್ಲೆಯಲ್ಲಿ 2,278 ಮೂರ್ತಿ ಪ್ರತಿಷ್ಠಾಪನೆ
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 2,278 ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ವಿಘ್ನ ನಿವಾರಕನ ಮೂರ್ತಿಗಳು ಹಂತ ಹಂತವಾಗಿ ವಿಸರ್ಜನೆಗೊಳ್ಳಲಾಗುತ್ತಿದೆ. ಶಿವಮೊಗ್ಗದಲ್ಲಿ 521, ಭದ್ರಾವತಿ 419, ತೀರ್ಥಹಳ್ಳಿ 208, ಹೊಸನಗರ 206, ಸಾಗರ 358, ಶಿಕಾರಿಪುರ 268, ಸೊರಬದಲ್ಲಿ 298 ಮೂರ್ತಿಗಳ ಪ್ರತಿಷ್ಠಾಪನೆ ಮಾಡಲಾಗಿದೆ.
ಬಿಗಿ ಭದ್ರತೆ ನಡುವೆ ವಿಸರ್ಜನೆ
ಜಿಲ್ಲೆಯಲ್ಲಿ ಭಾನುವಾರ 1,036 ಮೂರ್ತಿಗಳನ್ನು ವಿಸರ್ಜನೆ ಮಾಡುತಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಎಲ್ಲಿಯೂ ಅಹಿತಕರ ಘಟನೆಗಳು ವರದಿಯಾಗಿಲ್ಲ.