ಸುದ್ದಿ ಕಣಜ.ಕಾಂ | DISTRICT | AIRPORT
ಶಿವಮೊಗ್ಗ: ಸೋಗಾನೆಯಲ್ಲಿ ನಿರ್ಮಾಣ ಹಂತದಲ್ಲಿರುವ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದೆ. ವಿಮಾನ ಹಾರಾಟ ಆರಂಭವಾಗುತ್ತಿದ್ದಂತೆಯೇ ಮೊದಲ ಹಂತದಲ್ಲಿ ಐದು ಮಾರ್ಗಗಳಿಗೆ ವಿಮಾನ ಸಂಚಾರ ಆರಂಭಿಸುವ ಯೋಚನೆ ಇದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
https://www.suddikanaja.com/2021/06/12/shivamogga-airport-work-will-complete-before-june/
ಸಾಗರ ರಸ್ತೆಯಲ್ಲಿರುವ ಕೈಗಾರಿಕೆ ವಸಾಹತು ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಸೆಪ್ಟೆಂಬರ್ 13ರೊಳಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕಿದ್ದು, ಶಿವಮೊಗ್ಗದಿಂದ ಐದು ಮಾರ್ಗಗಳಲ್ಲಿ ವಿಮಾನ ಸಂಚಾರಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಶಿವಮೊಗ್ಗದಿಂದ ಬೆಂಗಳೂರು, ಚೆನ್ನೈ, ಮುಂಬೈ ಸೇರಿದಂತೆ ಐದು ಮಾರ್ಗಗಳ ಪ್ರಸ್ತಾವನೆಯನ್ನು ಕಳುಹಿಸಲಾಗುವುದು. ಉಡಾನ್ ಯೋಜನೆ ಅಡಿ ಈ ಮಾರ್ಗಗಳಲ್ಲಿ ವಿಮಾನಗಳ ಸಂಚಾರವಾಗಲಿದೆ ಎಂದು ತಿಳಿಸಿದರು.
READ | ಭದ್ರಾವತಿಯಲ್ಲಿ ಬೀದಿ ನಾಯಿಗಳ ಮಾರಣ ಹೋಮ ಪ್ರಕರಣ, ಪಂಚಾಯಿತಿ ಸದಸ್ಯರು ಸೇರಿ 9 ಜನರ ಬಂಧನ
ಕೈಗಾರಿಕೆ, ಪ್ರವಾಸೋದ್ಯಮ ಅಭಿವೃದ್ಧಿಗೆ ಪೂರಕ
ಶಿವಮೊಗ್ಗದ ಕೈಗಾರಿಕೆಗಳ ಅಭಿವೃದ್ಧಿಗೆ ವಿಮಾನ ಸಂಚಾರ ಪೂರಕವಾಗಲಿದೆ. ಜತೆಗೆ, ಪ್ರವಾಸೋದ್ಯಮ ವಲಯಕ್ಕೂ ಬೇಡಿಕೆ ಹೆಚ್ಚಲಿದೆ. ಈ ಉದ್ಯಮವನ್ನೇ ಅವಲಂಬಿಸಿರುವ ಉದ್ಯಮಿಗಳಿಗೆ ಅನುಕೂಲವಾಗಲಿದೆ. ಉದ್ಯೋಗ ಸೃಷ್ಟಿ ಆಗಲಿದೆ ಎಂದು ಹೇಳಿದರು.
ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಎಸ್.ದತ್ತಾತ್ರಿ, ಸೂಡಾ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಆಯುಕ್ತ ಚಿದಾನಂದ್ ವಟಾರೆ, ಉದ್ಯಮಿಗಳಾದ ಸತ್ಯನಾರಾಯಣ್, ಉಮೇಶ್ ಶೆಟ್ಟಿ ಉಪಸ್ಥಿತರಿದ್ದರು.
https://www.suddikanaja.com/2021/01/11/drip-irrigation-to-canal-in-shivamogga/