ಸುದ್ದಿ ಕಣಜ.ಕಾಂ | CITY | CRIME
ಶಿವಮೊಗ್ಗ: ಮಗನೇ ಅಪ್ಪನನ್ನು ತೆಂಗಿನ ರಟ್ಟೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಮಂಡೆನಕೊಪ್ಪದಲ್ಲಿ ಸಂಭವಿಸಿದೆ.
ಮಗ ಮಧು ಎಂಬಾತ ತನ್ನ ತಂದೆಯಾದ ಕುಮಾರ್ ನಾಯ್ಕ್(55)ನನ್ನು ಕೊಲೆ ಮಾಡಿದ್ದಾನೆ. ಈ ಬಗ್ಗೆ ಮೃತನ ಪತ್ನಿಯು ತುಂಗಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಐಪಿಸಿ ಕಲಂ 302, 201 ಅನ್ವಯ ಪ್ರಕರಣ ದಾಖಲಾಗಿದೆ.
ಆ ರಾತ್ರಿ ನಡೆದಿದ್ದೇನು?
ಮನೆಯಲ್ಲಿನ ದಿನಸಿ ಸಾಮಗ್ರಿಗಳನ್ನು ಮಾರಾಟ ಮಾಡಿ ಬಂದ ಹಣದಿಂದ ಕುಡಿದು ಹಣ ಹಾಳು ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಇಬ್ಬರ ನಡುವೆ ಭಾನುವಾರ ರಾತ್ರಿ ಜಗಳವಾಗಿದೆ. ನಂತರ, ಮಧು ತೆಂಗಿನ ರಟ್ಟೆಯಿಂದ ತಲೆಯ ಭಾಗಕ್ಕೆ ಹೊಡೆದಿದ್ದಾನೆ. ಗಾಯಗೊಂಡಿದ್ದ ಕುಮಾರ್ ನಾಯ್ಕ್ ಮೃತಪಟ್ಟಿದ್ದಾನೆ.