ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ಶಾಲೆಗಳಲ್ಲಿ ಆರನೇ ತರಗತಿ ಪ್ರವೇಶಕ್ಕೆ ಸೆಪ್ಟೆಂಬರ್ 16ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ರ ವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳ 12 ಪರೀಕ್ಷಾ ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ನಡೆಯುತ್ತಿವೆ ಎಂದು ಅಪರ ಜಿಲ್ಲಾಧಿಕಾರಿ ನಾಗೇಂದ್ರ ಎಫ್. ಹೊನ್ನಳ್ಳಿ ಹೇಳಿದರು.
https://www.suddikanaja.com/2021/09/09/gopishettikoppa-govindapura-houses/
ಜಿಲ್ಲಾಡಳಿತ ಸಭಾಂಗಣದಲ್ಲಿ ಏರ್ಪಡಿಸಿದ್ದ ಪರೀಕ್ಷಾ ಪೂರ್ವಸಿದ್ಥತೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪರೀಕ್ಷೆಯಲ್ಲಿ ಜಿಲ್ಲೆಯ ಸುಮಾರು 3,500ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಪರೀಕ್ಷಾ ಪ್ರಾಧಿಕಾರವು ಹೊರಡಿಸಿರುವ ಮಾರ್ಗಸೂಚಿಯಂತೆ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪಾರದರ್ಶಕಗಾಗಿ ಅಧಿಕಾರಿಗಳನ್ನು ನಿಯೋಜಿಸುವಂತೆ ಸೂಚನೆ ನೀಡಿದರು.
READ | ಚಿಕ್ಕಮಗಳೂರಿಗೆ ಬರಲಿದ್ದಾರಂತೆ ಉಸೇನ್ ಬೋಲ್ಟ್!
ಕೋವಿಡ್ ಬಾಧಿತರಿದ್ದಲ್ಲಿ ಮುಂಚೆಯೇ ತಿಳಿಸಿ
ಕೋವಿಡ್-೧೯ರಿಂದ ಬಾಧಿತರಾಗಿರುವ ವಿದ್ಯಾರ್ಥಿಗಳಿದ್ದಲ್ಲಿ ಅಂತಹ ವಿದ್ಯಾರ್ಥಿಗಳ ಪೋಷಕರು ಸಂಕೋಚವಿಲ್ಲದೆ ಪರೀಕ್ಷಾ ಮೇಲ್ವಿಚಾರಕರಿಗೆ ಮುಂಚಿತವಾಗಿ ತಿಳಿಸಿ, ಬಾಧಿತ ವಿದ್ಯಾರ್ಥಿಗಳಿಗಾಗಿ ಪ್ರತ್ಯೇಕವಾಗಿ ಸೃಜಿಸಲಾಗಿರುವ ಕೊಠಡಿಯಲ್ಲಿ ಪರೀಕ್ಷೆಯನ್ನು ನಡೆಸಲು ಕ್ರಮ ವಹಿಸಲಾಗುವುದು ಎಂದರು.
ಡಿಡಿಪಿಐ ಎನ್.ಎಂ.ರಮೇಶ್, ಜಿಲ್ಲಾ ಖಜಾನಾಧಿಕಾರಿ ಎಚ್.ಎಸ್.ಸಾವಿತ್ರಿ, ಲೋಕಸೇವಾ ಆಯೋಗದ ಪ್ರಾಂತೀಯ ಕಚೇರಿ ಅಧಿಕಾರಿಗಳು ಸೇರಿದಂತೆ ನಿಯೋಜಿತ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
https://www.suddikanaja.com/2021/02/23/shivamogga-zilla-panchayat-gb-meeting/