ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು: ಸ್ವದೇಶಿ ಸಂಸ್ಥೆ ಅದೂ ನಮ್ಮ ಕನ್ನಡದವರದ್ದೇ ಆದ ‘ಕೂ’ ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ನೀಡಿದೆ.
ಸಾಮಾಜಿಕ ಜಾಲತಾಣ ಕ್ಷೇತ್ರದಲ್ಲಿ ಧೂಳೆಬ್ಬಿಸುತ್ತಿರುವ ಹಾಗೂ ಕನ್ನಡಿಗರ ಮನಸ್ಸಿಗೆ ಹತ್ತಿರವಾಗುತ್ತಿರುವ ಈ ತಾಣ ಒಂದು ಕೋಟಿ ಬಳಕೆದಾರರ ಗುರಿಯನ್ನು ಯಶಸ್ವಿಯಾಗಿ ತಲುಪಿದೆ. ಈ ಹೊಸ್ತಿಲಲ್ಲೇ ಇನ್ನಷ್ಟು ನೇಮಕಾತಿಯ ಗುಟ್ಟನ್ನು ಕೂ ಸಹ ಸಂಸ್ಥಾಪಕ ಅಪ್ರಮೇಯ ರಾಧಾಕೃಷ್ಣ ಅವರು ಬಿಟ್ಟುಕೊಟ್ಟಿದ್ದಾರೆ.
ಸರ್ಕಾರಿ ಸಂಬಂಧಗಳು, ಮಾರ್ಕೆಟಿಂಗ್, ಬ್ರಾಂಡ್ ಮಾರ್ಕೆಟಿಂಗ್ ವಿಭಾಗದಲ್ಲೂ ನೇಮಕಾತಿ ಮಾಡಲಾಗುವುದು. ಭಾರತೀಯ ತಂತ್ರಜ್ಞಾನವನ್ನು ಜಾಗತಿಕ ಮಟ್ಟದಲ್ಲಿ ಪಸರಿಸುವ ಕೌಶಲವಿರುವವರೊಂದಿಗೆ ಕೆಲಸ ಮಾಡಲು ಸಿದ್ಧರಿದ್ದೇವೆ.
– ಅಪ್ರಮೇಯ ರಾಧಾಕೃಷ್ಣ, ‘ಕೂ’ ಸಹ ಸಂಸ್ಥಾಪಕ
ರಾಷ್ಟ್ರೀಯ ಸುದ್ದಿ ವಾಹನಿಯೊಂದಕ್ಕೆ ಇದರ ಬಗ್ಗೆ ತಿಳಿಸಿರುವ ಅಪ್ರಮೇಯ ಅವರು, ‘ಪ್ರಸ್ತುತ 200 ಜನ ನೌಕರರಿದ್ದಾರೆ. ಮುಂದಿನ ಒಂದು ವರ್ಷದಲ್ಲಿ ಕನಿಷ್ಠ 500 ಜನರನ್ನು ನೇಮಕ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ.
READ | ಕರ್ನಾಟಕ ಹೈಕೋರ್ಟ್ ನಲ್ಲಿ ಡಿಗ್ರಿ, ಪಿಜಿ ಮುಗಿಸಿದವರಿಗೆ ಉದ್ಯೋಗ ಅವಕಾಶ, ಅರ್ಜಿ ಸಲ್ಲಿಕೆಗೂ ಮುನ್ನ ಓದಿ
ಎಂಜಿನಿಯರಿಂಗ್, ಉತ್ಪನ್ನ ಹಾಗೂ ಸಮುದಾಯ ನಿರ್ವಹಣೆ ವಿಭಾಗಗಳಿಗೆ ನೌಕರರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಕೊರೊನಾ ಸಂಕಷ್ಟ ಕಾಲದಲ್ಲಿ ಉದ್ಯೋಗ ಇಲ್ಲದೇ ಸಂಕಷ್ಟಕ್ಕೆ ಸಿಲುಕಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ.
https://www.suddikanaja.com/2021/01/26/koo-application-developed-by-indian-got-good-response-from-users/