ಸುದ್ದಿ ಕಣಜ.ಕಾಂ | KARNATAKA | POLITICS
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದಾವಣಗೆರೆಯಲ್ಲಿ ಭಾನುವಾರ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸ್ಫೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನವೇ ಮೂಡಿದೆ!
ನಗರದ ತ್ರಿಶೂಲ್ ಕಲಾ ಭವನದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಯಡಿಯೂರಪ್ಪ ಮಾತನಾಡಿದರು.
ಯಡಿಯೂರಪ್ಪ ನೀಡಿದ ಹೇಳಿಕೆ ಏನು?
- ಕಾಂಗ್ರೆಸ್ ಈಗಾಗಲೇ ರಾಜ್ಯದಲ್ಲಿ ಎದ್ದು ಕುಳಿತಿದೆ. ಬಿಜೆಪಿಯೂ ಎಚ್ಚೆತ್ತುಕೊಳ್ಳಬೇಕು. ವಿರೋಧ ಪಕ್ಷವನ್ನು ಹಗುರವಾಗಿ ಪರಿಗಣಿಸಬಾರದು.
- ವಿರೋಧ ಪಕ್ಷಕ್ಕೆ ಅದರದ್ದೇ ಲೆಕ್ಕಾಚಾರವಿದೆ. ಈಗಾಗಲೇ ಬಿಜೆಪಿ ಮುಖಂಡರನ್ನು ಸೆಳೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಇದನ್ನು ಆ ಮುಖಂಡರೇ ನನಗೆ ತಿಳಿಸಿದ್ದಾರೆ. ಅತ್ಯಂತ ಎಚ್ಚರಿಕೆಯಿಂದ ಬಿಜೆಪಿ ಹೆಜ್ಜೆ ಇಡಬೇಕು. ಯಾರೂ ಬಿಜೆಪಿ ಬಿಟ್ಟು ಹೋಗಲ್ಲ. ಕಾಂಗ್ರೆಸ್ ನವರೇ ಬಿಜೆಪಿ ಬರಲಿದ್ದಾರೆ.
- ಬಿಜೆಪಿಗೆ ಎಸ್ಸಿ, ಎಸ್ಟಿ ಸಮುದಾಯದ ನಾಯಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆದುಕೊಂಡು ಬರಬೇಕು. ಅವರನ್ನು ವಿಶ್ವಾಸಕ್ಕೆ ಪಡೆಯಬೇಕು. ಬೂತ್ ಮಟ್ಟದಲ್ಲಿ ಕನಿಷ್ಠ 25 ಮಹಿಳೆಯರ ಮೋರ್ಚಾ ಮಾಡಿ, ಪಕ್ಷ ಮತ್ತಷ್ಟು ಬಲಪಡಿಸಬೇಕು.
- ಧಾರ್ಮಿಕ ಕೇಂದ್ರ ತೆರವು ವಿಚಾರದಲ್ಲಿ ಲೋಪಗಳಿದ್ದರೆ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲಾಗುವುದು. ಯಾರಲ್ಲೂ ಭೀತಿ ಬೇಡ
- ನಾನೊಬ್ಬನೇ ಪ್ರವಾಸ ಹೋಗಲ್ಲ. ನನ್ನೊಂದಿಗೆ ಸಂಸದರು, ಶಾಸಕರು, ಪರಿಷತ್ ಸದಸ್ಯರು ಬರಲಿದ್ದಾರೆ.
ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು.
https://www.suddikanaja.com/2021/06/01/mp-by-raghavendra-statement-on-khelo-india/