ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ಬೆಳ್ಳಂಬೆಳಗ್ಗೆ ವ್ಯಕ್ತಿಯೊಬ್ಬರ ಕೊರಳಿನಲ್ಲಿದ್ದ ಸರವನ್ನು ಕಿತ್ತು ಪರಾರಿಯಾಗಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ.
ಗೋಪಾಳ ನಿವಾಸಿ ಕೃಷ್ಣಮೂರ್ತಿ ಎಂಬುವವರ ಸರ ಕಸಿದುಕೊಂಡು ಅವರ ಮೇಲೆ ಹಲ್ಲೆ ಮಾಡಲಾಗಿದೆ. ಇವರು ನಿವೃತ್ತ ಸರ್ಕಾರಿ ನೌಕರರಾಗಿದ್ದು , ವಾಕಿಂಗ್ ಬಂದಾಗ ಘಟನೆ ನಡೆದಿದೆ.
READ | ದಾವಣಗೆರೆಯಲ್ಲಿ ಸ್ಫೋಟಕ ಹೇಳಿಕೆ ನೀಡಿದ ಯಡಿಯೂರಪ್ಪ, ರಾಜ್ಯ ರಾಜಕಾರಣದಲ್ಲಿ ಸಂಚಲನ
ತಡೆಯಲು ಯತ್ನಿಸಿದಾಗ ಹಲ್ಲೆ
ಚಂದನ ಟ್ರೀ ಪಾರ್ಕ್ ಸಮೀಪದ ಕ್ರೀಡಾಂಗಣದಲ್ಲಿ ವಾಕಿಂಗ್ ಮಾಡುವುದಕ್ಕೆ ಬಂದಿದ್ದ ಕೃಷ್ಣಮೂರ್ತಿ ಅವರಿಗೆ ಅಪರಿಚಿತರು ವಿಳಾಸ ಕೇಳುವುದಕ್ಕೆ ಇಬ್ಬರು ಬೈಕಿನಲ್ಲಿ ಬಂದಿದ್ದಾರೆ.
ಅವರಿಗೆ ಮಾಹಿತಿ ನೀಡುತಿದ್ದಾಗ ಸರವನ್ನು ಕಿತ್ತು ಕೊಂಡಿದ್ದಾರೆ. ಆಗ ಕೃಷ್ಣಮೂರ್ತಿ ಅವರು ದುಷ್ಕರ್ಮಿಗಳನ್ನು ತಡೆಯಲು ಯತ್ನಿಸಿದ್ದಾರೆ. ಅವರ ಮೇಲೆಯೇ ಹಲ್ಲೆ ಮಾಡಲಾಗಿದೆ. ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.