ಸುದ್ದಿ ಕಣಜ.ಕಾಂ | DISTRICT | PROTEST
ಶಿವಮೊಗ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಲೆನಾಡು ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಶರಾವತಿ ಮುಳುಗಡೆ ಸಂತ್ರಸ್ತರು ಬೃಹತ್ ಪ್ರತಿಭಟನೆ ಮಾಡಿದರು.
COVER STORY | ಶರಾವತಿ ಲಾಂಚ್ ಆಚೆಗೊಂದು ಅಜ್ಞಾತ ಬದುಕು, ಕಣ್ಮುಚ್ಚಿ ಕುಳಿತ ಆಡಳಿತ ಯಂತ್ರ
ಆರೋಪಗಳೇನು?
- ಸಾಗರ, ಹೊಸನಗರ ತಾಲ್ಲೂಕಿನ ರೈತರು 1 ಲಕ್ಷ ಎಕರೆಗೂ ಹೆಚ್ಚು ಭೂಮಿಯನ್ನು ಇದ್ಯುತ್ ಯೋಜನೆಗಾಗಿ ಕಳೆದುಕೊಂಡಿದ್ದಾರೆ. ಭೂಮಿ ಕಳೆದುಕೊಂಡು 60 ವರ್ಷವಾದರೂ ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಿರುವವರಿಗೆ ಮನೆ, ಜಮೀನಿನ ಹಕ್ಕುಪತ್ರಗಳನ್ನು ಇದುವರೆಗೂ ಕೊಟ್ಟಿಲ್ಲ.
- ಸಂತ್ರಸ್ತ ರೈತರಿಗೆ ಹಕ್ಕು ಪತ್ರ ನೀಡಲು ಆರಂಭವಾಗ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರಿಂದ ಡಿನೋಟಿಫಿಕೇಶನ್ ಮಾಡಿದ್ದು ಕಾನೂನು ಬಾಹಿರ ಎಂದು ಕಳೆದ ಮಾರ್ಚ್ ನಲ್ಲಿ ತೀರ್ಪು ನೀಡಿದೆ. ಈ ತೀರ್ಪು ಬಂದು ಆರು ತಿಂಗಳಾದರೂ, ಮೇಲ್ಮನವಿ ಸಲ್ಲಿಸಿಲ್ಲ. ಕೇಂದ್ರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ
ಮುಳುಗಡೆ ಸಂತ್ರಸ್ತರ ಬೇಡಿಕೆಗಳೇನು?
- ರಾಜ್ಯ ಸರ್ಕಾರ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ತಕ್ಷಣವೇ ಮೇಲ್ಮನವಿ ಸಲ್ಲಿಸಬೇಕು.
- ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮದನ್ ಗೋಪಾಲ್ ಅವರು ಮುಳುಗಡೆ ಸಂತ್ರಸ್ಥರ ಸಭೆಯಲ್ಲಿ ಕೈಗೊಂಡಿದ್ದ ನಡಾವಳಿ ಅನುಷ್ಠಾನಗೊಳಿಸಬೇಕು.
- ಕೆಲವರು ಮುಳುಗಡೆ ರೈತರನ್ನು ನಕಲಿ ಪರಿಸರವಾದಿಗಳು ಎಂದು ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಇದು ತಪ್ಪಬೇಕು.
ಪ್ರತಿಭಟನೆಯಲ್ಲಿ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್, ಪ್ರಮುಖರಾದ ಎಂ.ಬಿ. ರಾಜಪ್ಪ, ಷಣ್ಮುಖ, ಧರ್ಮರಾಜ್, ವೆಂಕಟೇಶ್, ಕೃಷ್ಣಮೂರ್ತಿ, ಶಿವಣ್ಣ ಹಲವರು ಭಾಗವಹಿಸಿದ್ದರು.