ಸುದ್ದಿ ಕಣಜ.ಕಾಂ | DISTRICT | AGRICULTURE NEWS
ಶಿವಮೊಗ್ಗ: ಗೋಹತ್ಯೆ ತಡೆ ಹಾಗೂ ಜಾನುವಾರು ಸಂರಕ್ಷಿಸಲು ಪ್ರತಿ ಜಿಲ್ಲೆಯಲ್ಲಿ ಒಂದು ಗೋಶಾಲೆಯನ್ನು ಸ್ಥಾಪಿಸಲು ಉದ್ದೇಶಿಸಿದೆ ಎಂದು ಪಶುಪಾಲನಾ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಗೋವಿನ ಸಂಪನ್ಮೂಲಗಳನ್ನು ರಕ್ಷಿಸಲು, ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣೆ ಕಾಯ್ದೆಯನ್ನು ಜಾರಿಗೊಳಿಸಿದೆ. ಇದರ ಕಟ್ಟುನಿಟ್ಟಿನ ಅನುಷ್ಠಾನಕ್ಕೆ ಗೋಶಾಲೆಗಳನ್ನು ತೆರೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಹಾಲಿ ಇರುವ ಗೋ ಶಾಲೆಯನ್ನು ಜಿಲ್ಲಾ ಗೋ ಶಾಲೆಯನ್ನಾಗಿಸಿ ವಿಸ್ತರಿಸುವ ಅಥವಾ ಪ್ರೋತ್ಸಾಹಿಸುವ ಸಂಬಂಧ ಈಗಾಗಲೇ ಶಿವಮೊಗ್ಗದಲ್ಲಿ ಅಸ್ತಿತ್ವದಲ್ಲಿರುವ ಗೋಶಾಲೆಗಳನ್ನು ನಡೆಸುತ್ತಿರುವ ಖಾಸಗಿ ಟ್ರಸ್ಟ್ ನವರು ಸೆಪ್ಟೆಂಬರ್ 29ರೊಳಗೆ ಶಿವಮೊಗ್ಗ ಪಶುಪಾಲನಾ ಇಲಾಖೆ ಉಪ ನಿರ್ದೇಶಕರು ಇವರನ್ನು ಸಂಪರ್ಕಿಸಿ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಅಭಿಪ್ರಾಯ ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ.