ಸುದ್ದಿ ಕಣಜ.ಕಾಂ | TALUK | POLITICS
ಶಿವಮೊಗ್ಗ: ತೀರ್ಥಹಳ್ಳಿ ರಾಜಕೀಯದಲ್ಲಿ ಮುಸುಕಿನ ಗುದ್ದಾಟ ಮತ್ತೆ ಮುಂದುವರಿದಿದೆ.
ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್, ಮಂಜುನಾಥ್ ಗೌಡ ಅವರ ಬಗ್ಗೆ ಹಲವು ಆರೋಪಗಳನ್ನು ಮಾಡಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ಏನಿದೆ?
- ಕಾಂಗ್ರೆಸ್ಸಿಗೆ ಸೇರಿದ ಮಾರನೇ ದಿನದಿಂದಲೇ
ಗುಂಪುಗಾರಿಕೆ ನಡೆಸುತ್ತಿದ್ದಾರೆ. ಹೀಗಾಗಿ, ಅವರನ್ನು ಪಕ್ಷದಿಂದ ಹೊರ ಹಾಕುವುದು ಜಿಲ್ಲಾ ರಾಜ್ಯ ಘಟಕಕ್ಕೆ ಅನಿವಾರ್ಯವಾಗಬಹುದು. - ತೀರ್ಥಹಳ್ಳಿ ವಿಧಾನಸಭೆ ಕ್ಷೇತ್ರ ಕಾಂಗ್ರೆಸ್ ಘಟಕವನ್ನು ಕಡೆಗಣಿಸಿ ಪಕ್ಷದ ಮುಖಂಡರ ಪೋಟೊ ಬಳಸಿ ಖಾಸಗಿ ಕಾರ್ಯಕ್ರಮ, ಪಾದಯಾತ್ರೆ ಚಳವಳಿ ಹಮ್ಮಿಕೊಂಡು ಭಾಗವಹಿಸಿ ಎಂದು ಕಾಂಗ್ರೆಸಿಗರನ್ನು ಆಹ್ವಾನಿಸಲಾಗುತ್ತಿದೆ. ಅವರ ವರ್ತನೆ ಪಕ್ಷ ವಿರೋಧಿ ಚಟುವಟಿಕೆ ಎಂದು ಭಾವಿಸಬೇಕಾಗಿದೆ.
- ಹಣ, ಹೆಂಡ, ಬಿರಿಯಾನಿ ಮೂಲಕ ತೀರ್ಥಹಳ್ಳಿ ಕೇತ್ರದಲ್ಲಿ, ಜನಮನ್ನಣೆ ಪಡೆಯಬಹುದೆಂಬ ಭಾವನೆ ಇದ್ದರೆ ಸಾಧ್ಯವಿಲ್ಲ. ಪಕ್ಷದಲ್ಲಿದ್ದು ಪಕ್ಷದ ಘಟಕಗಳನ್ನು ದೂರ ಮಾಡಿ ಹೋರಾಟದ ಹೆಸರಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
- ಶರಾವತಿ ಸಂತ್ರಸ್ತರು, ಬಗರ್ ಹುಕುಂ ಸಾಗುವಳಿ ರೈತರಿಗೆ ನ್ಯಾಯ ಕೊಡಿಸಲು ಮಂಜುನಾಥಗೌಡರು ಕಳೆದ 35 ವರ್ಷದಿಂದ ಹೋರಾಟ ಮಾಡಿಲ್ಲ. ಈಗಿನ ಹೋರಾಟಕ್ಕೆ ವಿಧಾನಸಭೆ ಚುನಾವಣೆ ಕಾರಣ
- ತಮ್ಮ ಜತೆಗೆ ಬರದಿದ್ದರೆ ಜಿಪಂ, ತಾಪಂ ಚುನಾವಣೆಯಲ್ಲಿ ಟಿಕೆಟ್ ಸಿಗದಂತೆ ಮಾಡುವ ಧಮಕಿ ಹಾಕಲಾಗಿದೆ ಎಂಬ ಆರೋಪ ಆರ್.ಎಂ.ಎಂ. ವಿರುದ್ಧ ಕೇಳಿ ಬಂದಿವೆ. ಇಂತಹ ಸ್ವಭಾವ ಹಲವು ವರ್ಷಗಳಿಂದ ಕಂಡಿದ್ದೇನೆ.
https://www.suddikanaja.com/2021/07/03/war-between-directors-in-sandalwood/