ಸುದ್ದಿ ಕಣಜ.ಕಾಂ | TALUK | CRIME
ಭದ್ರಾವತಿ: ಭದ್ರಾವತಿ ತಾಲೂಕು ಹುಣಸೆಕಟ್ಟೆ ಗ್ರಾಮದ ಜಾನಪ್ಪ ಬೈರು ಎಂಬುವವರ ತೋಟದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಸಾಗುವಾನಿ ನಾಟಾಗಳನ್ನು ವಶಕ್ಕೆ ಪಡೆಯಲಾಗಿದೆ.
ಅಕ್ರಮವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ಮೌಲ್ಯದ ಸಾಗುವನಿ ನಾಟವನ್ನು ಉಂಬ್ಳೇಬೈಲು ವಲಯ ಅರಣ್ಯಾಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ.
ಅಂದಾಜು 2 ಲಕ್ಷ ರೂಪಾಯಿ ಮೌಲ್ಯ
14 ಸಾಗುವನಿ ನಾಟಾವನ್ನು ವಶಪಡಿಸಿಕೊಂಡಿದ್ದಾರೆ. ಇದರ ಅಂದಾಜು ಮೌಲ್ಯ ಎರಡು ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ತೋಟದ ಮಾಲೀಕ ಜಾನಪ್ಪ ಬೈರು ಮತ್ತು ಅವರ ಮಗ ಜಗದೀಶ್ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ.
ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಆರ್.ಟಿ ಮಂಜುನಾಥ್, ಡಿವೈಆರ್ಎಫ್ಒ ಅಬ್ದುಲ್ ಕರೀಮ್, ಪವನ್, ಗಿರಿಸ್ವಾಮಿ, ಅರಣ್ಯ ರಕ್ಷಕ ಸುನೀಲ್, ಸೂರ್ಯವಂಶಿ ಭಾಗವಹಿಸಿದ್ದರು.