ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ಮನೆಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಸಾಗರ ಗ್ರಾಮಾಂತರ ಠಾಣೆ ವ್ಯಾಪ್ತಿಯ ಒಟ್ಟು 4 ಪ್ರಕರಣಗಳನ್ನು ಭೇದಿಸಲಾಗಿದೆ. ಬಂಧಿತ ಆರೋಪಿಯಿಂದ 87 ಗ್ರಾಂ 500 ಮಿಲಿ ತೂಕದ ಚಿನ್ನದ ಆಭರಣ, 190 ಗ್ರಾಂ ತೂಕದ ಬೆಳ್ಳಿಯ ಆಭರಣ, 41,680 ನಗದು ಹಣ ಹಾಗೂ ಕೃತ್ಯಕ್ಕೆ ಬಳಸಿದ ಟಿವಿಎಸ್ ಸ್ಟಾರ್ ಸಿಟಿ ಬೈಕ್ ವಶಪಡಿಸಿಕೊಳ್ಳಲಾಗಿದೆ.
ಸೆಪ್ಟೆಂಬರ್ 11ರಂದು ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಗೆಣಸಿನಕುಣಿ ಗ್ರಾಮದ ಮನೆಯೊಂದರಲ್ಲಿನ ಗಾಡ್ರೇಜ್ ಬೀರುವಿನಲ್ಲಿದ್ದ ಬೆಳ್ಳಿ, ಬಂಗಾರದ ಆಭರಣ ಮತ್ತು ನಗದು ಹಣ ಕಳವು ಮಾಡಲಾಗಿತ್ತು. ಈ ಸಂಬಂಧ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ತನಿಖೆ ಕೈಗೊಂಡ ಸಾಗರ ಗ್ರಾಮಾಂತರ ಠಾಣೆಯ ಪಿಐ, ಪಿಎಎಸ್ಐ ಮತ್ತು ಸಿಬ್ಬಂದಿಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
https://www.suddikanaja.com/2021/08/28/most-wanted-accused-arrested-in-shiralakoppa/