ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ನಗರದ ಖಾಸಗಿ ಕಾಲೇಜುವೊಂದರಲ್ಲಿ ಕಾಮರ್ಸ್ ಅಂತಿಮ ವರ್ಷದಲ್ಲಿ ಓದುತಿದ್ದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ.
ಕಾಶಿಪುರದ ಹರ್ಷ (22) ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾಶಿಪುರದ ಮನೆಯಲ್ಲಿ ತಾಯಿಯೊಂದಿಗೆ ವಾಸವಾಗಿದ್ದ ಈತನ ಸಹೋದರ ಬೆಂಗಳೂರಿನಲ್ಲಿದ್ದಾನೆ. ಏಕಾಏಕಿ ಆತ್ಮಹತ್ಯೆಗೆ ಶರಣಾಗುವುದರ ಹಿಂದಿನ ಕಾರಣ ಪತ್ತೆಯಾಗಿಲ್ಲ. ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.