ಸುದ್ದಿ ಕಣಜ.ಕಾಂ | DISTRICT | POLITICS
ಶಿವಮೊಗ್ಗ: ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 13ರ ಕಾಮಗಾರಿಗೆ ಭಾನುವಾರ ಲೋಕೋಪಯೋಗಿ ಇಲಾಖೆ ಸಚಿಚ ಸಿ.ಸಿ. ಪಾಟೀಲ್ ಅವರು ಚಾಲನೆ ನೀಡಿದರು.
ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಹಾಗೂ ಸಿಗಂದೂರು ಸೇತುವೆಯ ಬ್ಲೂಪ್ರಿಂಟ್ ವೀಕ್ಷಿಸುವುದಕ್ಕಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ (VIDEO REPORT)
ನಗರದ ಅರಕೇಶ್ವರ ದೇವಸ್ಥಾನದ ಸಮೀಪ ಭಾನುವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಲಾಯಿತು.
₹516.96 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲ್ದರ್ಜೆಗೇರಿಸುವ ಬಾಕಿ ಕಾಮಗಾರಿ ನಡೆಯಲಿದೆ.
₹43.90 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 13ರ ಕಿ.ಮೀ 525 ರಲ್ಲಿ ರೈಲ್ವೇ ಸರಪಳಿ 60/950 ರ ವಿದ್ಯಾನಗರ ಬಳಿಯ ವೃತ್ತಾಕಾರದ ರೈಲ್ವೇ ಮೇಲ್ಸುತುವೆ ನಿರ್ಮಾಣ ಮಾಡಲಾಗುವುದು. ₹20.12 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 206 ರ ಕಿ.ಮೀ 207.80 ಬೈಪಾಸ್ ರಸ್ತೆಯಲ್ಲಿ ತುಂಗಾ ನದಿಗೆ ಮತ್ತೊಂದು ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಸಿಗಲಿದೆ ಮತ್ತಷ್ಟು ವೇಗ, ಡಿಸಿ ನೀಡಿದ ನಿರ್ದೇಶನಗಳೇನು?
ಕಾಮಗಾರಿಗಳಲ್ಲಿ ಗುಣಮಟ್ಟಕ್ಕೆ ಆದ್ಯತೆ
ಗ್ರಾಮೀಣಾಭಿವೃದ್ದಿ ಮತ್ತು ಲೋಕೋಪಯೋಗಿ ಇಲಾಖೆಗಳ ಸಹಯೋಗದಲ್ಲಿ ಉತ್ತಮ ಕೆಲಸಗಳು ಆದಲ್ಲಿ ಸಾರ್ವಜನಿಕರಿಗೆ ಎಲ್ಲ ರೀತಿಯಲ್ಲಿ ಅನುಕೂಲವಾಗಲಿದೆ. ಶಂಕುಸ್ಥಾಪನೆಗೊಂಡಿರುವ ಕಾಮಗಾರಿಗಳು ಯಶಸ್ವಿಯಾಗಿ ನೆರವೇರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವಿಮಾನ ನಿಲ್ದಾಣದ ಕೆಲಸವನ್ನು ಸಹ ಗುಣಮಟ್ಟದೊಂದಿಗೆ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ತಿಳಿಸಿದ್ದೇನೆ ಎಂದರು.
₹400 ಕೋಟಿ ಹೆಚ್ಚುವರಿ ಅನುದಾನ
ಸಂಸದರಾದ ಬಿ.ವೈ.ರಾಘವೇಂದ್ರ ಮಾತನಾಡಿ, ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ರಸ್ತೆ ಮೇಲ್ದರ್ಜೆಗೇರಿಸುವ ಕಾಮಗಾರಿಗೆ 2014 ರಲ್ಲೇ ಮಂಜೂರಾತಿ ದೊರೆತಿದೆ. ಚನ್ನಗಿರಿವರೆಗೆ ಕಾಮಗಾರಿ ನಡೆದು ₹100 ಕೋಟಿ ಕಾಮಗಾರಿ ಬಾಕಿ ಇತ್ತು. ಇದೀಗ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಕೇಂದ್ರದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಈ ಕಾಮಗಾರಿಗೆ ₹400 ಕೋಟಿ ಹೆಚ್ಚುವರಿ ಅನುದಾನ ತಂದು ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ಲೋಕೋಪಯೋಗಿ ಸಚಿವರು ನಗರದಲ್ಲಿ ಆರಂಭಿಸಲಾಗಿರುವ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸುವವರೆಗೆ ನಮಗೆ ನೆರವು ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಸಿಗಂದೂರು ಕೇಬಲ್ ಬ್ರಿಡ್ಜ್ ಮತ್ತು ವಿದ್ಯಾನಗರ ವೃತ್ತಾಕಾರದ ಮೇಲ್ಸೇತುವೆ ಪಿಪಿಟಿ ಪ್ರದರ್ಶನ ಬಿತ್ತರಿಸಲಾಯಿತು.
ವಿಧಾನ ಪರಿಷತ್ ಶಾಸಕ ಆರ್.ಪ್ರಸನ್ನಕುಮಾರ್, ಆರ್ಯ ವೈಶ್ಯ ಅಭಿವೃದ್ದಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್, ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಪಾಲಿಕೆ ಸದಸ್ಯೆ ಯಮುನಾ ಉಪಸ್ಥಿತರಿದ್ದರು.
ಇದು ಹೆಸರಿಗಷ್ಟೇ ರಾಷ್ಟ್ರೀಯ ಹೆದ್ದಾರಿ, ಸಿಗಂದೂರು ಹೋಗುವವರಿಗೆ ನಿತ್ಯ ಸಂಕಟ, ಡೆಡ್ಲಿ ರಸ್ತೆಯಲ್ಲಿ ಅಪಾಯಕ್ಕೆ ಆಹ್ವಾನ