ಸುದ್ದಿ ಕಣಜ.ಕಾಂ | TALUK | RELIGIOUS
ಸಾಗರ: ಮತಾಂತರ ಮಾಡಲು ಯತ್ನಿಸಿದ ಇಬ್ಬರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಘಟನೆ ನಡೆದಿದ್ದು, ಜೋಗಫಾಲ್ಸ್ ನ ಅನಿಲ್ ಕುಮಾರ್ ಹಾಗೂ ಅವರ ಪತ್ನಿ ಪ್ರಶಾಂತಿ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದ್ದು ಅವರನ್ನು ಬಂಧಿಸಲಾಗಿದೆ.
READ | ಸಾರ್ವಜನಿಕ ಸ್ಥಳದಲ್ಲಿ ಪುಂಡಾಟ, ಎಸ್ಕೇಪ್ಆದ ಯುವಕರ ಗುಂಪಿನ ವಿರುದ್ಧ ಬಿತ್ತು ಕೇಸ್
ನಡೆದಿದ್ದೇನು?
ತಾಳಗುಪ್ಪ ಗ್ರಾಮದ ಜ್ಯೋತಿ ಎಂಬುವವರ ಪತಿಯು ಮೂರು ವರ್ಷಗಳ ಹಿಂದೆ ಮೃತಪಟ್ಟಿದ್ದು, ಅವರು ಮನೆಯಲ್ಲಿ ಒಬ್ಬರೇ ಇರುವಾಗ ಮನೆಗೆ ಭೇಟಿ ನೀಡಿ ಆಮೀಷಗಳನ್ನು ನೀಡಲಾಗಿದೆ. ನಂತರ, ಹಿಂದೂ ಧರ್ಮದಿಂದ ಕ್ರೈಸ್ತ ಧರ್ಮಕ್ಕೆ ಮತಾಂತರ ಆಗಬೇಕು ಎಂದು ಒತ್ತಡ ಹೇರಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಜ್ಯೋತಿಯೇ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ.