ಸುದ್ದಿ ಕಣಜ.ಕಾಂ | DISTRICT | CRIME
ಶಿವಮೊಗ್ಗ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕನಾಗಿ ಕಾಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾದ ಘಟನೆ ಮಂಗಳವಾರ ಬೆಳಗಿನ ಜಾವ ನಡೆದಿದೆ.
ಗಿರಿರಾಜ್(39) ಎಂಬುವವರು ನಾಪತ್ತೆಯಾಗಿದ್ದು, ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯಲ್ಲಿ ಆತಂಕ ಮೂಡಿಸಿದೆ. ಮಂಗಳವಾರ ಬೆಳಗ್ಗೆ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದಾಗಿ, ಮನೆಯವರು ಗಾಬರಿಯಾಗಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಯ ವಾಟ್ಸಾಪ್ ಗೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂದೇಶ ಕಳುಹಿಸಿ ಗಿರಿರಾಜ್ ಕಾಣೆಯಾಗಿದ್ದಾರೆ. ಇದು ಇನ್ನಷ್ಟು ಆತಂಕ ಸೃಷ್ಟಿಸಿದೆ.
ಡೆತ್ ನೋಟ್ಗೆ ಕಾರಣವೇನು?
ಕಾರ್ಯದ ಒತ್ತಡ ಹಾಗೂ ಮೇಲಾಧಿಕಾರಿಗಳ ಕಿರುಕುಳದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಸ್ತುತ ಹುಡುಕಾಟ ನಡೆದಿದ್ದು, ಹೆಚ್ಚುವರಿ ಮಾಹಿತಿ ಲಭ್ಯವಾಗಿಲ್ಲ.