ಸುದ್ದಿ ಕಣಜ.ಕಾಂ | CITY | FESTIVAL
ಶಿವಮೊಗ್ಗ: ಸೆಪ್ಟೆಂಬರ್ 10ರ ಗಣೇಶ ಚತುರ್ಥಿಯಂದು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಂಸ ಮಾರಾಟ ಉದ್ದಿಮೆದಾರರು ಅಂದು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.