ಸುದ್ದಿ ಕಣಜ.ಕಾಂ | KARNATAKA | SPORTS
ಶಿವಮೊಗ್ಗ: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ 19 ವರ್ಷದೊಳಗಿನ ರಾಜ್ಯ ತಂಡಕ್ಕೆ ಶಿವಮೊಗ್ಗ ವಲಯದ ಮಿಥೇಶ್ ಕುಮಾರ್ ಆಯ್ಕೆಯಾಗಿದ್ದಾರೆ.
ಅವರು ಇಂದೋರ್ ನಲ್ಲಿ ನಡೆಯಲಿರುವ ವಿನೂ ಮಂಕಡ್ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ.
ಮಹಿಳಾ ತಂಡಕ್ಕೆ ನಿರ್ಮಿತಾ
19 ವರ್ಷದೊಳಗಿನ ರಾಜ್ಯ ಮಹಿಳಾ ತಂಡದಲ್ಲಿ ಶಿವಮೊಗ್ಗದ ಸಿ.ಜೆ. ನಿರ್ಮಿತ ಸ್ಥಾನ ಪಡೆದಿದ್ದಾರೆ.
ಶಿವಮೊಗ್ಗ ವಲಯದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಯುವ ಕ್ರಿಕೆಟ್ ಪ್ರತಿಭೆಗಳು ಬೆಳಕಿಗೆ ಬರುತ್ತಿದ್ದು ಇಂತಹ ಪ್ರತಿಭೆಗಳು ಮಿಥೇಶ್ ಹಾಗೂ ನಿರ್ಮಿತಾ ಅವರ ಸಾಧನೆಯಿಂದ ಸ್ಫೂರ್ತಿ ಪಡೆಯಲಿ ಎಂದು ಕೆ.ಎಸ್.ಸಿ.ಎ.ಶಿವಮೊಗ್ಗ ವಲಯ ಸಂಚಾಲಕ ಡಿ.ಎಸ್.ಅರುಣ್ ತಿಳಿಸಿದ್ದಾರೆ. ಇವರಿಬ್ಬರಿಗೂ ಕೆ.ಎಸ್.ಸಿ.ಸಿ ಶಿವಮೊಗ್ಗ ವಲಯದಿಂದ ಅಭಿನಂದನೆ ಸಲ್ಲಿಸಲಾಗಿದೆ.