ಸುದ್ದಿ ಕಣಜ.ಕಾಂ | TALUK | CRIME NEWS
ಭದ್ರಾವತಿ: ಕುಡಿದ ಅಮಲಿನಲ್ಲಿ ಸಾರ್ವಜನಿಕರ ವಿರೋಧದ ನಡುವೆಯೂ ತುಂಗಭದ್ರ ನದಿ ಕೂಡವ ಜಾಗಕ್ಕೆ ಇಳಿದ ವ್ಯಕ್ತಿಯೊಬ್ಬರು ನದಿ ಪಾಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಆತನನ್ನು ರಕ್ಷಿಸಿದ್ದಾರೆ.
READ | ಗಂಗಾಸ್ನಾನ ವೇಳೆ ತುಂಗಭದ್ರಾ ನದಿ ಪಾಲಾದ ಎಂಜಿನಿಯರಿಂಗ್ ವಿದ್ಯಾರ್ಥಿ
ಚಿಕ್ಕಕೂಡ್ಲಿ ನಿವಾಸಿ ಮಂಜು ಎಂಬಾತನನ್ನು ರಕ್ಷಿಸಲಾಗಿದೆ. ಈಜುವುದಕ್ಕಾಗಿ ನದಿಗೆ ಇಳಿದ ಮಂಜು ಏಕಾಏಕಿ ನದಿಯ ಸೆಳೆತಕ್ಕೆ ಸಿಲುಕಿದ್ದಾನೆ. ರಕ್ಷಣೆಗಾಗಿ ಕೂಗಿಕೊಂಡಿದ್ದಾನೆ. ಅದೃಷ್ಟವಷಾತ್ ಅಲ್ಲಿಯೇ ಕಾರ್ಯಾಚರಣೆ ನಡೆಸುತಿದ್ದರು. ಊಟಕ್ಕೆ ಹೋದಾಗ ಈ ಘಟನೆ ನಡೆದಿದ್ದು, ತಕ್ಷಣ ರಕ್ಷಣೆಗೆ ಧಾವಿಸಿದ್ದಾರೆ. ಹೀಗಾಗಿ, ಜೀವಹಾನಿಯಾಗಿಲ್ಲ.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಠಾಧಿಕಾರಿ ಕೆ.ಎನ್. ಪ್ರವೀಣ್ ಸೇರಿ ಮತ್ತಿತರರು ಭಾಗವಹಿಸಿದ್ದರು.