ಸುದ್ದಿ ಕಣಜ.ಕಾಂ | KARNATAKA | RAIN FALL
ಶಿವಮೊಗ್ಗ: ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು ಹಾಸನದಲ್ಲಿ ಭಾನುವಾರ ಮತ್ತು ಸೋಮವಾರ ಯೆಲ್ಲೋ ಅಲರ್ಟ್ ಘೋಷಿಸಿದ್ದು, ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಾಹೀನ್ ಮತ್ತು ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪರಿಣಾಮ ಅಕ್ಟೋಬರ್ 6ರ ವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಅದರಲ್ಲಿ ಅ.3, 4ರಂದು ಮಲೆನಾಡು ಭಾಗದಲ್ಲಿ ಮಳೆಯಾಗಲಿದೆ. 5,6ರಂದು ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
READ | ಶಿವಮೊಗ್ಗದಲ್ಲಿ ಧಾರಾಕಾರ ಮಳೆ ಸೃಷ್ಟಿಸಿದ ಅನಾಹುತ, ಹಲವೆಡೆ ಧರೆಗೆ ಕುಸಿದ ಮರ
ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಅ.3 ಮತ್ತು 4ರಂದು ಭಾರಿ ವರ್ಷಧಾರೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅದರಂತೆ,ಭಾನುವಾರ ಸಂಜೆಯಿಂದ ಗುಡುಗು ಸಹಿತ ಮಳೆಯಾಗುತಿದೆ. ಇದು ಇನ್ನೊಂದು ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ, ಬುಧವಾರ ಸಹ ಅಲ್ಲಲ್ಲಿ ಮಳೆಯಾಗಲಿದೆ.
ಮುಂದುವರಿಯಲಿದೆ ಮಳೆಯ ಆರ್ಭಟ
ಹಾಸನ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅ. 3 ಮತ್ತು 4ರಂದು ಹಾಗೂ ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಅ. 5 ಮತ್ತು 6ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಡುಗು, ಮಿಂಚು ಸಹಿತ ಮಳೆ ಸುರಿಯುತಿದ್ದು, ಶಿವಮೊಗ್ಗದ ನಾನಾ ಕಡೆಗಳಲ್ಲಿ ಅನಾಹುತ ಸಂಭವಿಸಿದೆ.
https://www.suddikanaja.com/2021/05/14/red-alert-in-shivamogga/