ಸುದ್ದಿ ಕಣಜ.ಕಾಂ | CITY | POLITICS
ಶಿವಮೊಗ್ಗ: ಮಹಾನಗರ ಪಾಲಿಕೆಗೆ ಐಎಎಸ್ ಅಧಿಕಾರಿಯನ್ನು ನಿಯೋಜಿಸಬೇಕು ಎಂದು ಆಗ್ರಹ ಪದೇ ಪದೆ ಕೇಳಿ ಬರುತ್ತಲೇ ಇದೆ.
ಮಂಗಳವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾಧ್ಯಮಗೋಷ್ಠಿ ಕರೆದಿದ್ದು, ಮತ್ತೊಮ್ಮೆ ಆಗ್ರಹಿಸಿದರು.
ಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದು ನಿನ್ನೆ ನಡೆದ ಎಸಿಬಿ ದಾಳಿಯಿಂದ ಜಗತ್ ಜಾಹೀರು ಆಗಿದೆ. ಸಾರ್ವಜನಿಕರಿಂದ ಹಣ ಕೇಳುತ್ತಿರುವುದು ಬಹಿರಂಗಗೊಂಡಿದೆ. ವಿರೋಧ ಪಕ್ಷದ ನಾಯಕರ ಮಾತುಗಳಿಗೆ ಆದ್ಯತೆ ನೀಡಲಾಗುತ್ತಿಲ್ಲ ಎಂದು ಆರೋಪಿಸಿದರು.
ಪಾಲಿಕೆ ಅಧಿಕಾರಿಗಳು ನಿರ್ಲಕ್ಷ್ಯ ತೋರುತಿದ್ದಾರೆ. ಮೇಯರ್ ಅವರಿಗೆ ಕೆಲಸ ಮಾಡಬೇಕೆಂಬ ಆಸಕ್ತಿ ಇದೆ. ಆದರೆ, ಆಡಳಿತ ವರ್ಗ ಸಹಕಾರ ನೀಡುತ್ತಿಲ್ಲ. ಹೀಗಾಗಿ, ಪಾಲಿಕೆಗೆ ಐಎಎಸ್ ಅಧಿಕಾರಿ ನಿಯೋಜಿಸಬೇಕು ಎಂದು ಆಗ್ರಹಿಸಿದರು.
ಸ್ಮಾರ್ಟ್ ಸಿಟಿ ಕಾಮಗಾರಿಯಲ್ಲೂ ಲೋಪ
ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲೂ ಸಾಕಷ್ಟು ಲೋಪಗಳಾಗುತ್ತಿವೆ. ಇದರ ಬಗ್ಗೆ ಸಚಿವರಾಗಲಿ, ಅಧಿಕಾರಿಗಳಾಗಲಿ ಗಮನಹರಿಸುತ್ತಿಲ್ಲ. ಕಾಮಗಾರಿ ಪರಿಶೀಲಿಸಲು ತಾಂತ್ರಿಕ ಎಂಜಿನಿಯರ್ ಇಲ್ಲ ಎಂದು ಆಪಾದಿಸಿದರು.
ಪಕ್ಷದ ಪ್ರಮುಖರಾದ ಚಂದ್ರಭೂಪಾಲ್, ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ರೇಖಾ ರಂಗನಾಥ್, ಮೆಹಖ್ ಷರೀಫ್ ಉಪಸ್ಥಿತರಿದ್ದರು.
https://www.suddikanaja.com/2020/11/28/ias-kas-training-program-in-shivamogga/