ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ತಾಲೂಕಿನ ಕಾನಲೆ ಕ್ರಾಸ್ ಸಮೀಪ ಅಕ್ರಮವಾಗಿ ಸಾಗಿಸುತ್ತಿದ್ದ ಕಳಬಟ್ಟಿಯನ್ನು ಅಬಕಾರಿ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ವ್ಯಕ್ತಿಯೊಬ್ಬರು ಬೈಕ್ ನಲ್ಲಿ ಕಳಬಟ್ಟಿಯನ್ನು ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ. ಆಗ ನಾಲ್ಕು ಲೀಟರ್ ಕಳಬಟ್ಟಿ ಸಮೇತ ಆರೋಪಿ ಬಲೆಗೆ ಬಿದ್ದಿದ್ದಾನೆ. ಆತನನ್ನು ಬಂಧಿಸಿದ್ದು, ಪ್ರಕರಣ ದಾಖಲಾಗಿದೆ.