ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ರಾಜೀವಗಾಂಧಿ ಬಡಾವಣೆಯ ರೋಟರಿ ಚಿತಾಗಾರದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಮಂಗಳವಾರ ಮಧ್ಯಾಹ್ನ ಬಂಧಿಸಲಾಗಿದೆ.
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿ ಬೆಂಗಾಲಿ ಕ್ಯಾಂಪ್ನ ಉತ್ತಮ್, ಕೊಲಾಸ್ ಹಾಗೂ ರಾಜೀವ್ಗಾಂಧಿ ಬಡಾವಣೆ ನಿವಾಸಿಗಳಾದ ಸೈಯದ್ ಅಫ್ಜಲ್, ಸೈಯದ್ ಸಲ್ಮಾನ್ ಎಂಬುವವರನ್ನು ಬಂಧಿಸಲಾಗಿದೆ.
ಬಂಧಿತರ ಬಳಿ ಸಿಕ್ತು ಲಕ್ಷಾಂತರ ಮೌಲ್ಯದ ಗಾಂಜಾ
ಬಂಧಿತರ ಬಳಿಯಿಂದ ಅಂದಾಜು ₹1.65 ಲಕ್ಷ ಮೌಲ್ಯದ ಒಟ್ಟು 2 ಕೆಜಿ 782 ಗ್ರಾಂ ತೂಕದ ಒಣ ಗಾಂಜಾ ಹಾಗೂ 2 ದ್ವಿ ಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ವಿರುದ್ದ ಎನ್ಡಿಪಿಎಸ್ ಕಾಯ್ದೆ ಅಡಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
ಖಚಿತ ಮಾಹಿತಿ ಮೇರೆಗೆ ದಾಳಿ
ರಾಜೀವಗಾಂಧಿ ಬಡಾವಣೆಯ ರೋಟರಿ ಚಿತಾಗಾರ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಕೋಟೆ ಪೊಲೀಸ್ ಠಾಣೆ ಪಿ.ಐ ಹಾಗೂ ಸಿಬ್ಬಂದಿ ತಂಡವು ದಾಳಿ ನಡೆಸಿದೆ.
https://www.suddikanaja.com/2021/03/16/ganja-supply-4-accused-arrested-in-shikaripura/