ಸುದ್ದಿ ಕಣಜ.ಕಾಂ | TALUK | DEATH NEWS
ಹೊಸನಗರ: ತಾಲೂಕು ಮಾರುತಿಪುರ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಓಂಕೇಶ್ ಗೌಡ್ರು ಸಂಪಳ್ಳಿ ಮಂಗಳವಾರ ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ದೀರ್ಘಕಾಲದ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಓಂಕೇಶ್ ನಿಧನರಾಗಿದ್ದಾರೆ. ಇವರು 20 ವರ್ಷಕ್ಕೂ ಹೆಚ್ಚು ಕಾಲ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತರಾಗಿ, ಸತತ 2 ಬಾರಿ ಮಾರುತಿಪುರ ಪಂಚಾಯಿತಿ ಸಂಪಳ್ಳಿ ಕ್ಷೇತ್ರದಿಂದ ಸದಸ್ಯರಾಗಿ, ಪಂಚಾಯಿತಿ ಅಧ್ಯಕ್ಷರು ಆಯ್ಕೆಯಾಗಿದ್ದರು.
ಓಂಕೇಶ ಗೌಡ್ರು ಸಂಪಳ್ಳಿ ಅವರ ಅಕಾಲಿಕ ನಿಧನಕ್ಕೆ ಸಂಬಂಧಿಕರು, ಸ್ನೇಹಿತರು, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರು, ಕಾಂಗ್ರೆಸ್ ಮುಖಂಡ ಕಲಗೋಡ ರತ್ನಾಕರ್, ಪ್ರಮುಖರಾದ ಬಿ.ಜಿ.ಚಂದ್ರಮೌಳಿ, ಎಚ್. ಬಿ.ಚಿದಂಬರ್, ಸರ್ವ ಸದಸ್ಯರು ಸಂತಾಪ ಸೂಚಿಸಿದ್ದಾರೆ.