ಸುದ್ದಿ ಕಣಜ.ಕಾಂ | TALUK | ARECANUT DISEASE
ತೀರ್ಥಹಳ್ಳಿ: ಅಡಿಕೆ ಎಲೆಚುಕ್ಕೆ ರೋಗವು ಆತಂಕಕಾರಿ ಅಲ್ಲ. ಹೀಗಾಗಿ, ಭಯಪಡುವ ಅಗತ್ಯವಿಲ್ಲ ಎಂದು ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಸಸ್ಯ ವಿಜ್ಞಾನಿ ಗಂಗಾಧರ್ ನಾಯ್ಕ್ ಹೇಳಿದರು.
ಪಟ್ಟಣದ ಸೀಬಿನಕೆರೆ ಅಡಿಕೆ ಸಂಶೋಧನಾ ಕೇಂದ್ರದಲ್ಲಿ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿವಿ, ತೋಟಗಾರಿಕೆ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ `ಅಡಿಕೆ ಎಲೆಚುಕ್ಕೆ ರೋಗ ರೋಗ ನಿರ್ವಹಣೆ, ಬೇಸಾಯದ ಸಮಗ್ರ ಮಾಹಿತಿ’ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು.
ಮಣ್ಣಿನ ಪರೀಕ್ಷೆ ಮಾಡಿಸಿದ್ದಲ್ಲಿ ರೋಗಕ್ಕೆ ಕಾರಣವಾದ ಅಂಶಗಳನ್ನು ಪತ್ತೆ ಹಚ್ಚಬಹುದಾಗಿದೆ. ಎಲೆಚುಕ್ಕೆ ರೋಗಕ್ಕೆ ಸಿಂಪಡಿಸಿದ ಬೋರ್ಡೋ ಮಿಶ್ರಣವು ಔಷಧ 10 ದಿನಗಳವರೆಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.
ವಿಶ್ವವಿದ್ಯಾಲಯ ಉಪ ಕುಲಪತಿ ಡಾ.ಎಂ.ಕೆ.ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ತೋಟಗಾರಿಕೆ ವಿವಿ ಉಪ ನಿರ್ದೇಶಕ ರಾಮಚಂದ್ರಪ್ಪ ಮಡಿವಾಳ, ಮ್ಯಾಮ್ಕೋಸ್ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ, ಮಣ್ಣಿನ ವಿಜ್ಞಾನಿ ಡಾ.ಕೆ.ಎಸ್.ನಿರಂಜನ್ ಉಪಸ್ಥಿತರಿದ್ದರು.
https://www.suddikanaja.com/2021/09/24/paddy-cultivation-and-management/