ಸುದ್ದಿ ಕಣಜ.ಕಾಂ | CITY | CRIME NEWS
ಶಿವಮೊಗ್ಗ: ವೈಯಕ್ತಿಕ ವೈಷಮ್ಯ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಬಾಪೂಜಿನಗರ ಗಂಗಾಮತ ಹಾಸ್ಟೆಲ್ ಹತ್ತಿರ ಗುರುವಾರ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಗಾಡಿಕೊಪ್ಪದ ಸ್ವಾಮಿವಿವೇಕಾನಂದ ಬಡಾವಣೆ ನಿವಾಸಿ ಸಂತೋಷ್(30) ಹತ್ಯೆಯಾದ ಯುವಕ.
READ | ಇಂದು ಶಿವಮೊಗ್ಗ ದಸರಾ ಜಂಬೂ ಸವಾರಿ, ಮೆರವಣಿಗೆ ಸಾಗುವ ಮಾರ್ಗ ಇಲ್ಲಿದೆ
ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆಮಾಡಿದ್ದು, ತಲೆ ಭಾಗಕ್ಕೆ ಬಲವಾಗಿ ಹೊಡೆಯಲಾಗಿದೆ. ಪರಿಣಾಮ ಆತ ಮೃತಪಟ್ಟಿದ್ದಾನೆ. ಕೊಲೆಗೆ ಖಚಿತ ಕಾರಣ ಮತ್ತು ಯಾರು ಈ ಕೃತ್ಯ ಎಸಗಿದ್ದಾರೆ ಎಂಬುವುದು ಗೊತ್ತಾಗಿಲ್ಲ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.