ಸುದ್ದಿ ಕಣಜ.ಕಾಂ | CITY | POLITICAL NEWS
ಶಿವಮೊಗ್ಗ: ನಗರದಲ್ಲಿ ಗಾಂಜಾ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ. ಇದನ್ನು ನಿಯಂತ್ರಿಸುವಲ್ಲಿ ಕ್ಷೇತ್ರದ ಶಾಸಕ ಕೆ.ಎಸ್.ಈಶ್ವರಪ್ಪ ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಆರೋಪಿಸಿದರು.
ಸರ್ಕಾರಿ ಕಚೇರಿಯಲ್ಲಿ ಕೆಲಸಗಳು ಸಕಾಲಕ್ಕೆ ಆಗುತ್ತಿಲ್ಲ.ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಹಣ ಲೂಟಿ ಮಾಡಲಾಗುತ್ತಿದೆ. ಕಾಂಗ್ರೆಸ್ ಅವಧಿಯಲ್ಲಿ ಮಂಜೂರು ಆಗಿದ್ದ ಸಿಟಿಗಳ ಪೈಕಿ 30 ಮಾತ್ರ ಬಂದಿದ್ದು, ಅವುಗಳನ್ನು ನಗರ ವ್ಯಾಪ್ತಿಯಲ್ಲಿ ಓಡಿಸುತ್ತಿಲ್ಲ. ಈ ಎಲ್ಲವುಗಳ ಬಗ್ಗೆ ಕ್ಷೇತ್ರದ ಶಾಸಕರು ಏಕೆ ಗಮನಹರಿಸುತ್ತಿಲ್ಲ ಎಂದು ಹೇಳಿದರು.
ಪ್ರಮುಖರಾದ ಬೊಮ್ಮನಕಟ್ಟೆ ಮಂಜುನಾಥ್, ಎನ್.ಕೆ.ಶಾಮಸುಂದರ್, ಆರ್.ಕೆ. ಉಮೇಶ್, ದೀಪಕ್ ಸಿಂಗ್, ಶಾಮೀರ್ ಖಾನ್ ಉಪಸ್ಥಿತರಿದ್ದರು.
https://www.suddikanaja.com/2021/02/11/one-more-tusker-site-in-umblebailu-forest-area-people-panic/