ಸುದ್ದಿ ಕಣಜ.ಕಾಂ | DISTRICT | SHIVAMOGGA AIRPORT
ಶಿವಮೊಗ್ಗ: ಇಷ್ಟು ದಿನ ಸುಮ್ಮನಿದ್ದ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ಇಡಬೇಕು ಎಂಬ ಒತ್ತಾಯ ಕೇಳಿಬಂದಿಂದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದ ಶಿವಮೊಗ್ಗ ಜಿಲ್ಲಾ ಬಿ.ಎಸ್. ಯಡಿಯೂರಪ್ಪ ಅಭಿಮಾನಿ ಬಳಗದ ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.
ವಿಮಾನ ನಿಲ್ದಾಣ ಮಂಜೂರು ಹಾಗೂ ಕಾಮಗಾರಿ ಪುನರಾರಂಭ ಸೇರಿದಂತೆ ಶಿವಮೊಗ್ಗದ ಅಭಿವೃದ್ಧಿಗೆ ನಿರಂತರ ಪ್ರಯತ್ನಿಸಿರುವ ಯಡಿಯೂರಪ್ಪ ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಬೇಕು. ಈ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಆಗ್ರಹಿಸಲಾಗಿದೆ.
ಬಳಗದ ಜಿಲ್ಲಾಧ್ಯಕ್ಷ ಜಿ.ಟಿ.ಮಂಜುನಾಥ್, ಕೆ.ಸಿ.ನಾಗರಾಜ್, ಆರ್.ಕೆ. ದೇವದಾಸ್, ಎಚ್.ರಾಜಶೇಖರ್, ಎಸ್.ಎಂ. ವೆಂಕಟೇಶ್, ರಾಜಯ್ಯ ಉಪಸ್ಥಿತರಿದ್ದರು.