ಸುದ್ದಿ ಕಣಜ.ಕಾಂ
ಸೊರಬ: ಜನತಾ ದಳ (ಸೆಕ್ಯೂಲರ್) ಈಗ ಜನತಾ ದಳ (ಫ್ಯಾಮಿಲಿ) ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಾಂಗ್ ನೀಡಿದರು.
ತಾಲೂಕಿನ ಕುಬಟೂರು ಗ್ರಾಮದಲ್ಲಿರುವ ಮಾಜಿ ಶಾಸಕ ಎಸ್.ಮಧುಬಂಗಾರಪ್ಪ ಅವರ ನಿವಾಸಕ್ಕೆ ಶನಿವಾರ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಬಿಜೆಪಿ ಕೋಮುವಾದಿ, ಜೆಡಿಎಸ್ ಆಂತರಿಕ ಕೋಮುವಾದಿ
ಬಿಜೆಪಿ ಕೋಮುವಾದಿಯಾಗಿದ್ದು, ಜೆಡಿಎಸ್ ಆಂತರಿಕ ಕೋಮುವಾದಿ ಪಕ್ಷವಾಗಿದೆ. ಬಿಜೆಪಿಗೆ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಗೌರವವಿಲ್ಲ. ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಮಾತ್ರ ಪ್ರಗತಿ ಸಾಧ್ಯ ಎಂದು ಹೇಳಿದರು.
ರೈಟ್ ಮ್ಯಾನ್ ಇನ್ ರೈಟ್ ಪ್ಲೇಸ್
ಮಧು ಬಂಗಾರಪ್ಪ ಅವರ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, ಇದುವರೆಗೆ ರೈಟ್ ಪರ್ಸನ್; ರಾಂಗ್ ಪಾರ್ಟಿಯಲ್ಲಿದ್ದರು. ಕಾಂಗ್ರೆಸ್ ಸೇರ್ಪಡೆ ಬಳಿಕ ರೈಟ್ ಪರ್ಸನ್ ರೈಟ್ ಪಾರ್ಟಿಗೆ ಬಂದಂತಾಗಿದೆ. ಪಕ್ಷ ಅವರಿಗೆ ಸೂಕ್ತ ಸ್ಥಾನಮಾನ ನೀಡಲಿದೆ ಎಂದು ಹೇಳಿದರು.
ಸಿಂದಗಿ ಹಾಗೂ ಹಾನಗಲ್ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ. ಬಿಜೆಪಿಯ ಸುಳ್ಳು ಆಶ್ವಾಸನೆಗಳಿಂದ ಜನರು ಬೇಸತ್ತಿದ್ದಾರೆ ಎಂದು ಹೇಳಿದರು.
ಮಾಜಿ ಶಾಸಕ ಮಧು ಬಂಗಾರಪ್ಪ, ಪ್ರಮುಖರಾದ ಆರ್.ಪ್ರಸನ್ನ ಕುಮಾರ್, ಡಾ.ರಾಜನಂದಿನಿ, ಭೀಮಣ್ಣ ನಾಯ್ಕ್, ಮಹಾದೇವಪ್ಪ, ಕಲಗೋಡು ರತ್ನಾಕರ್, ಆರ್. ಶ್ರೀಧರ್ ಹುಲ್ತಿಕೊಪ್ಪ, ಆರ್.ಸಿ. ಪಾಟೀಲ್, ಮಂಜುನಾಥ ಕುಬಟೂರು ಹಲವರು ಉಪಸ್ಥಿತರಿದ್ದರು.
https://www.suddikanaja.com/2021/03/02/madu-bandarappa-said-about-joining-congress/