ಸುದ್ದಿ ಕಣಜ.ಕಾಂ | KARNATAKA | JOB JUNCTION
ರಾಯಚೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ ಬೆನ್ನಲ್ಲೇ ಸಾರಿಗೆ ಸಚಿವ ಬಿ.ಶ್ರೀರಾಮುಲು ಅದನ್ನೇ ಪುನರುಚ್ಛಿಸಿದ್ದಾರೆ.
READ | ಕಲ್ಯಾಣ ಕರ್ನಾಟಕದಲ್ಲಿ 20,000 ಉದ್ಯೋಗ ನೇರ ನೇಮಕಾತಿ, ಮಾಹಿತಿಗಾಗಿ ಕ್ಲಿಕ್ಕಿಸಿ
ರಾಯಚೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು, ಕಲ್ಯಾಣ ಕರ್ನಾಟಕ ಪ್ರದೇಶದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 25,000 ಹುದ್ದೆಗಳ ಭರ್ತಿಯನ್ನು ರಾಜ್ಯ ಸರ್ಕಾರ ಶೀಘ್ರವೇ ಮಾಡಲಿದೆ. ಅದಕ್ಕಾಗಿ, ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಹಲವು ವರ್ಷಗಳಿಂದ ನೇಮಕಾತಿಗಾಗಿ ಕಾಯುತ್ತಿರುವ ಲಕ್ಷಾಂತರ ಅಭ್ಯರ್ಥಿಗಳಿಗೆ ಅನುಕೂಲ ಆಗಲಿದೆ.
371(ಜೆ) ಅನುಷ್ಠಾನದಲ್ಲಿ ಲೋಪವಾದರೆ ಕ್ರಮ
ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದು, ಯಾವುದೇ ಕಾರಣಕ್ಕೆ ಅನ್ಯಾಯ ಆಗಲು ಅವಕಾಶ ನೀಡುವುದಿಲ್ಲ. ಒಂದುವೇಳೆ, ಅನುಷ್ಠಾನದಲ್ಲಿ ಲೋಪಗಳಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.