ಸುದ್ದಿ ಕಣಜ.ಕಾಂ | DISTRICT | LOAN FEST
ಶಿವಮೊಗ್ಗ: ಅಕ್ಟೋಬರ್ 28ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಬೃಹತ್ ಸಾಲ ಸಂಪರ್ಕ ಮೇಳವನ್ನು ಆಯೋಜಿಸಲಾಗಿದೆ ಎಂದು ಲೀಡ್ ಬ್ಯಾಂಕ್ ಮ್ಯಾನೇಜರ್ ಯತೀಶ್ ತಿಳಿಸಿದ್ದಾರೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹಾಗೂ ಮುಂಬರುವ ಹಬ್ಬದ ಪ್ರಯುಕ್ತ ಎಲ್ಲ ರಾಷ್ಟ್ರೀಕೃತ ಬ್ಯಾಂಕ್, ವಾಣಿಜ್ಯ ಬ್ಯಾಂಕ್, ಗ್ರಾಮೀಣ ಬ್ಯಾಂಕ್, ಕೋ-ಆಪರೇಟಿವ್ ಬ್ಯಾಂಕ್ ಹಾಗೂ ಎಲ್ಲ ಬ್ಯಾಂಕ್ ಗಳ ವತಿಯಿಂದ ಈ ಮೇಳದಲ್ಲಿ ಸಾಲ ನೀಡಲಾಗುವುದು.
ಯಾವುದಕ್ಕೆಲ್ಲ ಸಾಲ ಲಭ್ಯ?
ಕೃಷಿ ಸಾಲ, ಗೃಹ ಸಾಲ, ವಾಹನ ಸಾಲ, ಎಂಎಸ್.ಎಂಇ ಹಾಗೂ ಇತರೆ ಸಾಲಗಳನ್ನು ನೀಡುವುದರೊಂದಿಗೆ ವಿವಿಧ ಸಾಲಗಳ ಸಮಗ್ರ ಮಾಹಿತಿ ನೀಡಲಾಗುವುದು.
ಪಿಎಂ ಜನ ಸುರಕ್ಷಾ ಯೋಜನೆಗಳನ್ನು ಹೆಚ್ಚು ಪ್ರಚಲಿತಗೊಳಿಸಲು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ಸಾಮಾಜಿಕ ಭದ್ರತೆ ಯೋಜನೆಗಳಾದ ಪಿಎಂಜೆಡಿವೈಯಲ್ಲಿ ಖಾತೆ ತೆರೆಯಲು ಪೂರಕವಾಗಲಿದೆ. ಪಿಎಂಎಸ್.ಬಿವೈ, ಪಿಎಂಜೆಜೆಬಿವೈ ಮತ್ತು ಎಪಿವೈ ದಾಖಲಾತಿ ಮಾಡಲು ಪೂರಕವಾಗಲಿದೆ.
ಸರ್ಕಾರದ ಯೋಜನೆಗಳಾದ ಕೃಷಿ ಮೂಲಸೌಕರ್ಯ ನಿಧಿ, ಪಿಎಂಇಜಿಪಿ, ಪಿಎಂಎವೈ, ಪಿಎಂ ಸ್ವನಿಧಿ, ಪಿಎಂಎಫ್ಎಂಇ, ಸ್ಟ್ಯಾಂಡ್ ಅಪ್ ಇಂಡಿಯಾ, ಇಸಿಎಲ್ಜಿಎಸ್ ಹಾಗೂ ಮುಂತಾದ ಯೋಜನೆಗಳಿಗೆ ಪ್ರಾಮುಖ್ಯತೆ ನೀಡಿ ಸಾಲವನ್ನು ಮಂಜೂರು ಮಾಡಲು ನಿರ್ದೇಶಿಸಲಾಗಿದೆ.
ಈ ಸಾಲ ಮೇಳದಲ್ಲಿ ಅರ್ಹ ಫಲಾನುಭವಿಗಳಿಗೆ ಸ್ಥಳದಲ್ಲೇ ಸಾಲ ಮಂಜೂರಾತಿ ನೀಡಲು ಸದಸ್ಯ ಬ್ಯಾಂಕುಗಳಿಗೆ ನಿರ್ದೇಶನ ನೀಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆಯುವಂತೆ ಕೋರಲಾಗಿದೆ.
ಸಾಲ ಮೇಳ ಉದ್ಘಾಟನೆ
ಬೃಹತ್ ಸಾಲ ಸಂಪರ್ಕ ಮೇಳದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ಪಂಚಾಯಿತಿ ಸಿಇಓ ಎಂ.ಎಲ್.ವೈಶಾಲಿ, ಎಲ್ಲ ಬ್ಯಾಂಕುಗಳ ಉನ್ನತ ಅಧಿಕಾರಿಗಳು ಪಾಲ್ಗೊಳ್ಳುವರು ಎಂದು ತಿಳಿಸಿದ್ದಾರೆ.
https://www.suddikanaja.com/2021/09/18/bill-proposed-in-assembly-about-online-gambling-and-betting/