ಸುದ್ದಿ ಕಣಜ.ಕಾಂ | CITY | PROTEST
ಶಿವಮೊಗ್ಗ: ನಗರದ ಮಲವಗೊಪ್ಪ ಸರ್ಕಾರಿ ಶಾಲೆಗೆ ಸೋಮವಾರ ಭೇಟಿ ನೀಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಮನವಿ ಪತ್ರ ಸಲ್ಲಿಸಿದರು.
ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ತರಗತಿ ಬಹಿಷ್ಕಾರ ಮತ್ತು ಶಾಲಾ ಬಹಿಷ್ಕಾರದಂತಹ ಅಂತಿಮ ಹೋರಾಟಕ್ಕೆ ಸಂಘಟನೆ ನಿರ್ಧಾರ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಂ. ರವಿ, ಪ್ರಧಾನ ಕಾರ್ಯದರ್ಶಿ ಎಂ.ರಾಜು ಉಪಸ್ಥಿತರಿದ್ದರು.
ಶಿಕ್ಷಕರು ಸಲ್ಲಿಸಿದ ಬೇಡಿಕೆಗಳೇನು?
- ಪದವೀಧರ ಶಿಕ್ಷಕರ ಸಮಸ್ಯೆ
- ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ
- ಸೇವಾವಧಿಯಲ್ಲಿ ಶಿಕ್ಷಕರು ಬಯಸುವ ಜಿಲ್ಲೆಗೆ ಒಂದು ಬಾರಿ ವರ್ಗಾವಣೆ
- ಮುಖ್ಯಗುರುಗಳಿಗೆ 15, 20, 25 ವರ್ಷಗಳ ವೇತನ ಬಡ್ತಿ
- ಗ್ರಾಮೀಣ ಕೃಪಾಂಕ ಶಿಕ್ಷಕರ ಸಮಸ್ಯೆ
- ದೈಹಿಕ ಶಿಕ್ಷಕರ ಸಮಸ್ಯೆ, ಬೇಸಿಗೆ ರಜಾ ಅವಧಿಯಲ್ಲಿ ಬಿಎಲ್ಒ ಆಗಿ ಚುನಾವಣೆ ಕರ್ತವ್ಯ ನಿರ್ವಹಿಸಿದ ಶಿಕ್ಷಕರಿಗೆ ಗಳಿಕೆ ರಜೆ ನೀಡದಿರುವ ಸಮಸ್ಯೆ
- ಈ ಎಲ್ಲ ಸಮಸ್ಯೆಗಳ ಬಗ್ಗೆ ಸರ್ಕಾರದ ಬಗ್ಗೆ ನಿರಂತರವಾಗಿ ತರಲಾಗುತ್ತಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
https://www.suddikanaja.com/2021/09/13/opposition-to-national-education-policy/