ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ: ಮಾನಸಿಕ ಚಿಕಿತ್ಸೆ ಕೊಡಿಸುವುದಕ್ಕಾಗಿ ನಗರದ ಮಾನಸ ನರ್ಸಿಂಗ್ ಹೋಮ್ ಗೆ ಕರೆತಂದಾಗ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಇತ್ತೀಚೆಗೆ ನಡೆದಿದೆ.
ಹಾವೇರಿ ಜಿಲ್ಲೆಯ ಹಾವನೂರು ನಿವಾಸಿ ದುರ್ಗಪ್ಪ ಹಳ್ಳಿ(30) ನಾಪತ್ತೆಯಾದ ವ್ಯಕ್ತಿ. ಇವರು ಮಾನಸಿಕವಾಗಿ ಅಸ್ವಸ್ಥರಾಗಿದ್ದು ಚಿಕಿತ್ಸೆ ಕೊಡಿಸಲೆಂದು ನಗರದ ಆಸ್ಪತ್ರೆಗೆ ಕರೆತರಲಾಗಿದೆ. ಆಗ ಅವರು ತಪ್ಪಿಸಿಕೊಂಡಿದ್ದಾರೆ.
ನಾಪತ್ತೆಯಾಗಿರುವ ವ್ಯಕ್ತಿಯು 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಬಣ್ಣ ಹೊಂದಿದ್ದು, ಕೈಯಲ್ಲಿ ಮಾನಸ ಆಸ್ಪತ್ರೆಯ ಬ್ಯಾಂಡೇಜ್ ಇರುತ್ತದೆ. ಕಿತ್ತಳೆ ಬಣ್ಣದ ಶರ್ಟ್ ಧರಿಸಿದ್ದು ಕನ್ನಡ ಮಾತನಾಡುತ್ತಾರೆ. ಇವರ ಸುಳಿವು ಯಾರಿಗಾದರೂ ಸಿಕ್ಕಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆಯನ್ನು ಸಂಪರ್ಕಿಸಿ ಮಾಹಿತಿ ನೀಡಬೇಕೆಂದು ಪ್ರಕಟಣೆ ತಿಳಿಸಿದೆ.