ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ಶಾಹಿ ಗಾರ್ಮೆಂಟ್ಸ್ ಗೆ ಮಹಿಳೆಯರನ್ನು ಕರೆದುಕೊಂಡು ಹೋಗುತ್ತಿದ್ದ ಓಮ್ನಿ ವ್ಯಾನ್ ವೊಂದರ ಬ್ರೇಕ್ ಫೇಲ್ ಆಗಿ ಚಾಲಕ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ.
ಚಾಲಕ ಸುರೇಶ್ ಕೆಳದಿಪುರ(45) ಎಂಬುವವರು ಮೃತಪಟ್ಟಿದ್ದು, ಮಾಸೂರು, ಕೆಳದಿ, ಕೆಳದಿಪುರ ಗ್ರಾಮದ ಮಹಿಳೆಯರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ದೀಪಾ, ಆಶಾ, ಅರ್ಪಿತಾ, ಕಲಾವತಿ, ಚೈತ್ರ, ಶ್ಯಾಮಲಾ, ರೇಣುಕಾ, ಜಯಶ್ರೀ, ಶಾಂಭವಿ ಎಂಬುವವರಿಗೆ ಗಾಯಗಳಾಗಿದ್ದು, ಅರ್ಪಿತಾ ಗಂಭೀರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ಕರೆತರಲಾಗಿದೆ.
ಶಾಸಕ ಹರತಾಳು ಹಾಲಪ್ಪ ಅವರು ಉಪ ವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದರು. ಗಾರ್ಮೆಂಟ್ಸ್ ಮಾಲೀಕರೊಂದಿಗೆ ಮಾತನಾಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವವರಿಗೆ ಚಿಕಿತ್ಸೆ ವೆಚ್ಚ ಭರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಮೃತನ ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ
ಗಾಯಾಳುಗಳ್ನು ಭೇಟಿ ನೀಡಿ ಮಾತನಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕು ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಗಾರ್ಮೆಂಟ್ಸ್ ನವರೇ ಭರಿಸಬೇಕು ಎಂದು ಆಗ್ರಹಿಸಿದರು.
https://www.suddikanaja.com/2021/07/16/accident-woman-died/