ಸುದ್ದಿ ಕಣಜ.ಕಾಂ | TALUK | CRIME NEWS
ತೀರ್ಥಹಳ್ಳಿ: ರಾವಣ ವೇಷಧಾರಿಯೊಬ್ಬರ ಶವವು ತುಂಗಾನದಿಯಲ್ಲಿ ಶನಿವಾರ ಪತ್ತೆಯಾಗಿದೆ.
ಮೃತನನ್ನು ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗೋವಿಂದ್ (49) ಎಂದು ಗುರುತಿಸಲಾಗಿದೆ. ಪಟ್ಟಣದ ಕುರುವಳ್ಳಿ ಸಮೀಪ ಕಳೆದ ಮೂರು ದಿನಗಳ ಹಿಂದೆ ಈತ ನದಿಗೆ ಹಾರಿ ಕಣ್ಮರೆಯಾಗಿದ್ದ. ಮೂಲತಃ ಕಲಾವಿದರಾಗಿರುವ ಗೋವಿಂದ್ ಅವರು ರಾವಣ ವೇಷ ಧರಿಸಿ ಬೀದಿಗಳಲ್ಲಿ ಜನರಿಂದ ಹಣ ಸಂಗ್ರಹಿಸುತ್ತಿದ್ದರು. ಏಕಾಏಕಿ ತುಂಗಾ ನದಿಗೆ ಹಾರಿದ್ದು, ಕಾರಣ ಇನ್ನೂ ತಿಳಿದುಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.