ಸುದ್ದಿ ಕಣಜ.ಕಾಂ | TALUK | SIGANDUR
ಸಿಗಂದೂರು(ಸಾಗರ): ಸಿಗಂದೂರಿನಿಂದ ಬೆಂಗಳೂರಿಗೆ ಖಾಸಗಿ ಬಸ್ ಸಂಚಾರ ಅಕ್ಟೋಬರ್ 7ರಿಂದ ಪ್ರಾರಂಭ ವಾಗಲಿದ್ದು, ಧರ್ಮಾಧಿಕಾರಿಗಳು ಉದ್ಘಾಟಿಸಲಿದ್ದಾರೆ.
7ರಿಂದ 15ರ ವರೆಗೆ ಶ್ರೀ ಕ್ಷೇತ್ರ ಸಿಗಂದೂರಿನಲ್ಲಿ ಶರನ್ನವರಾತ್ರಿ
ತಾಲ್ಲೂಕಿನ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದಲ್ಲಿ ಅಕ್ಟೋಬರ್ 7 ರಿಂದ 15ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ. ಎಸ್. ರಾಮಪ್ಪ ತಿಳಿಸಿದ್ದಾರೆ.
ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಅಕ್ಟೋಬರ್ 7ರಂದು ಗೌರಿಗದ್ದೆಯ ಅರಿವಿನ ಗುರು ಅವದೂತ ಶ್ರೀ ವಿನಯ್ ಗುರೂಜಿ ಆಗಮಿಸಲಿದ್ದು `ಅಂಧಕಾರದಿಂದ ಬೆಳಕಿನೆಡೆಗೆ’ ವಿಶೇಷ ಆಶೀರ್ವಚನ ನೀಡಲಿದ್ದಾರೆ.
ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನವರಾತ್ರಿ ಹಿನ್ನೆಲೆಯಲ್ಲಿ ಪ್ರತಿ ದಿನ ಶ್ರೀ ದೇವಿಗೆ ಪಂಚಾಮೃತ ಅಭಿಷೇಕ. ಅಲಂಕಾರ ಪೂಜೆ. ಮಹಾಭೀಷೇಕ. ಚಂಡಿಕಾ ಹೋಮ. ಸಪ್ತಶತೀ ಪಾರಾಯಣ. ವಿವಿಧ ಹವನಗಳು ನೆಡೆಯಲಿದೆ. ಚೌಡಮ್ಮ ದೇವಿ ಯಕ್ಷಗಾನ ಮೇಳದಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.
ಶರಾವತಿ ಹಿನ್ನೀರಿನ ಸುಮಾರು 10 ಸರ್ಕಾರಿ ಶಾಲೆಗಳಿಗೆ ನಮ್ಮೂರ ಶಾಲಾ ಅಂದ ಚೆಂದದ ಅಂಗವಾಗಿ ಶ್ರೀ ಸಿಗಂದೂರು ಚೌಡಮ್ಮ ದೇವಿ ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲೆಗಳಿಗೆ ಸುಣ್ಣ ಬಣ್ಣ ಮಾಡಲಾಗಿದೆ. ಸಿಗಂದೂರು ದೇವಸ್ಥಾನದ ವತಿಯಿಂದ ಶರಾವತಿ ಹಿನ್ನೀರಿನ ಸರ್ಕಾರಿ ಶಾಲೆಗಳ ಉಳಿವಿಗೆ ಹೆಚ್ಚಿನ ಒತ್ತು ನೀಡಿರುವುದು ಉತ್ತಮ ಬೆಳವಣಿಗೆಯಾಗಿದೆ.
ಶ್ರೀ ಸಿಗಂದೂರು ಚೌಡಮ್ಮ ದೇವಿ ಎಜುಕೇಶನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಿಗಂದೂರು ಕಳೆದ ಹಲವು ವರ್ಷಗಳಿಂದ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಸೇವಾ ಕಾರ್ಯವನ್ನು ಮಾಡುತ್ತಾ ಬಂದಿದೆ. ಅದರಂತೆ 2021-22ನೇ ವರ್ಷದಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ಶೈಕ್ಷಣಿಕ ದೇಗುಲವಾದ ಸರ್ಕಾರಿ ಶಾಲೆಗಳ ಉಳಿಸುವಿಕೆ ಮತ್ತು ಅಂದ ಚಂದದ ಸುಂದರವಾದ ಶಾಲೆಯಾಗಿಸಲು ಸರ್ಕಾರಿ ಶಾಲೆಗಳ ಉಳಿವಿಗೆ ಶ್ರೀ ಕ್ಷೇತ್ರ ಸಿಗಂದೂರು ಎಜುಕೇಷನ್ ಆಂಡ್ ಚಾರಿಟೇಬಲ್ ಟ್ರಸ್ಟ್ ಒಂದು ಹೆಜ್ಜೆ ಮುಂದಿಟ್ಟಿದೆ.
ಶ್ರೀ ಕ್ಷೇತ್ರ ಸಿಗಂದೂರಿನ ಪ್ರಧಾನ ಕಾರ್ಯದರ್ಶಿಗಳಾದ ಎಚ್.ಆರ್.ರವಿಕುಮಾರ್ ಅವರ ವಿಶೇಷ ಕಾಳಜಿಯಿಂದ ಶರಾವತಿ ಹಿನ್ನೀರಿನ ಹಿಂದುಳಿದ ಆಯ್ದ ಸುಮಾರು 10 ಸರ್ಕಾರಿ ಶಾಲೆಗಳಿಗೆ ಸುಣ್ಣ ಬಣ್ಣ ಮಾಡುವ ವಿಶೇಷ ಕಾಯಕಲ್ಪಕ್ಕೆ ಸರ್ಕಾರಿ ಶಾಲೆಗಳತ್ತ ವಿದ್ಯಾರ್ಥಿಗಳು ಮುಖ ಮಾಡುವ ಮೂಲಕ ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸಿರುವುದು ಈ ಭಾಗದ ಜನರಿಗೆ ಹಾಗೂ ಶಿಕ್ಷಕರಿಗೆ ಸಂತಸ ತಂದಿದೆ.
`ಶ್ರೀ ಕ್ಷೇತ್ರ ಸಿಗಂದೂರಿನ ಚಿತ್ತ ಸರ್ಕಾರಿ ಶಾಲೆಗಳತ್ತ’ ಎಂಬ ವಿಶೇಷ ಮುನ್ನುಡಿಯೊಂದಿಗೆ ಮಹಾತ್ಮ ಗಾಂಧಿ ಜಯಂತಿಯಂದು ತಾಲ್ಲೂಕಿನ ತೀರಾ ಹಿಂದುಳಿದ ಪ್ರದೇಶವಾದ ಚನ್ನಗೊಂಡ ಗ್ರಾಮದ ಕಟ್ಟಿನಕಾರು ಕ್ಲಸ್ಟರ್ ನಲ್ಯಾರ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಲಾಯಿತು.
ಸರ್ಕಾರಿ ಶಾಲೆಗಳ ಉಳಿವಿಗೆ ಶ್ರೀ ಕ್ಷೇತ್ರದ ಜೊತೆಗೆ ಹಿನ್ನೀರಿನ ಸುಮಾರು 11 ಜನರ ಸಮಾನ ಮನಸ್ಕರ ಶಿಕ್ಷಕರ ತಂಡದ ಪಾತ್ರವು ಸಹ ಮೆಚ್ಚುಗೆಗೆ ಪಾತ್ರವಾಗಿದೆ.
ಈ ತಂಡದಲ್ಲಿ 3 ಜನ ಸಿ.ಆರ್.ಪಿ ಶಿಕ್ಷಕರು ಅನುಭವಿ ಪೈಂಟರ್, ಇಬ್ಬರು ನುರಿತ ಚಿತ್ರಕಲೆಗಾರರಿದ್ದು ಕರೂರು ಹೋಬಳಿಯ ಸಾಕಷ್ಟು ಶಿಕ್ಷಕರಿದ್ದು. ಕಳೆದ ಒಂದು ತಿಂಗಳಿನಿಂದ ಶ್ರೀ ಕ್ಷೇತ್ರದ ಜೊತೆಗೆ ಸರ್ಕಾರಿ ಶಾಲೆಗಳ ಉಳಿವಿಗೆ ಪ್ರತಿದಿನ ಬಿಡುವು ಮಾಡಿಕೊಂಡು ಹಾಗೂ ವಾರಾಂತ್ಯದಲ್ಲಿ ರಾತ್ರಿಯಿಡಿ ಸ್ವತಃ ಶಿಕ್ಷಕರೇ ಮುಂದೆ ನಿಂತು ಬಣ್ಣ ಬಳಿಯುದರ ಮೂಲಕ ಮಾದರಿಯಾಗಿದ್ದಾರೆ.
ಈಗಾಗಲೇ ಈ ಭಾಗದ ಹಲವು ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸಿರುವ ತಂಡವು ನಲ್ಯಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈಗಾಗಲೇ ಸಂಪೂರ್ಣ ಸುಣ್ಣ ಬಣ್ಣ ಮಾಡುವ ಮೂಲಕ ಹೊಸ ರೂಪ ನೀಡಿದ್ದಾರೆ.
ಕಳೆದ ಎರಡು ದಿನಗಳಿಂದ ರಾತ್ರಿಯಿಡಿ ಬಣ್ಣ ಬಳಿಯುವ ಮೂಲಕ ಶಾಲೆಗಳ ಉಳಿವಿಗೆ ಪ್ರಯತ್ನಿಸಿದ್ದಾರೆ. ಇವರಿಗೆ ಶ್ರೀ ಕ್ಷೇತ್ರ ಸಿಗಂದೂರು ಚೌಡೇಶ್ವರಿ ದೇವಸ್ಥಾನ ಆಡಳಿತ ಮಂಡಳಿ ಸಹ ಸಾಕಷ್ಟು ಸಹಕಾರ ನೀಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ಇನ್ನಷ್ಟು ಹೊಸ ಹೊಸ ಬಂದಿದೆ. ಕೊರೊನಾ ಕಷ್ಟಕಾಲದಲ್ಲಿಯೂ ಶ್ರೀ ಕ್ಷೇತ್ರದ ವತಿಯಿಂದ ಸಾಕಷ್ಟು ಸಹಕಾರ ನೀಡಲಾಗಿತ್ತು.
‘ಶ್ರೀ ಕ್ಷೇತ್ರ ಸಿಗಂದೂರಿನ ಚಿತ್ತ ಸರ್ಕಾರಿ ಶಾಲೆಗಳತ್ತ ‘ ಎಂಬ ಒಂದು ಶೈಕ್ಷಣಿಕ ಕಾಳಜಿಯ ಕಾರ್ಯವನ್ನು ನಾಡಿನ ಕನ್ನಡ ಸರ್ಕಾರಿ ಶಾಲೆಗಳಿಗೆ ಅರ್ಪಿಸುತ್ತಿದೆ. ಮೊದಲನೇ ಹಂತವಾಗಿ ಶರಾವತಿ ಹಿನ್ನೀರಿನ ಕರೂರು- ಭಾರಂಗಿ ಹೋಬಳಿಯ ಆಯ್ದ ಶಾಲೆಗಳನ್ನು ಅಭಿವೃದ್ಧಿ ಮಾಡುತ್ತಾ ಮುಂದಿನ ದಿನಗಳಲ್ಲಿ ರಾಜ್ಯ ವ್ಯಾಪಿ ವಿಸ್ತರಿಸುವ ಅಭಿಲಾಷೆಯನ್ನು ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಚ್.ಆರ್. ರವಿಕುಮಾರ್ ಕಂಡಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.