ಸುದ್ದಿ ಕಣಜ.ಕಾಂ | TALUK | PANCHAYATI NEWS
ಸಾಗರ: ತಾಲೂಕಿನ ಆನಂದಪುರ ಬಳಿಯ ಆಚಾಪುರ ಗ್ರಾಮ ಪಂಚಾಯಿತಿ ಸದಸ್ಯ ಖಲಿಮುಲ್ಲಾ ಅವರು ರಾಜೀನಾಮೆ ನೀಡಿದ್ದಾರೆ.
2021ರ ಮಾರ್ಚ್ ತಿಂಗಳಲ್ಲಿಯೇ ಪಿಡಿಒ ನಿವೃತ್ತಿ ಹೊಂದಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಹೊಸ ಪಿಡಿಒ ಅವರನ್ನು ಇಲ್ಲಿಗೆ ನಿಯೋಜನೆ ಮಾಡಿಲ್ಲ. ಪರಿಣಾಮ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ ಎಂದು ಗ್ರಾಪಂಂ ಅಧ್ಯಕ್ಷರಾದ ನಾಗರತ್ನಾ ಅವರಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಖಲಿಮುಲ್ಲಾ ತಿಳಿಸಿದ್ದಾರೆ.
ಹಲವು ಸಲ ಮನವಿ ಮಾಡಿದರೂ ಪ್ರಯೊಜನವಾಗಿಲ್ಲ
ಪಿಡಿಒ ನೇಮಕಾತಿ ಮಾಡದೇ ಇರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ಆಗುತ್ತಿರುವ ಹಿನ್ನಡೆಯ ಬಗ್ಗೆ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ, ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.