ಸುದ್ದಿ ಕಣಜ.ಕಾಂ | DISTRICT | RAIN FALL
ಶಿವಮೊಗ್ಗ: ಜಿಲ್ಲೆಯ ಹಲವೆಡೆ ಶುಕ್ರವಾರ ಗುಡುಗು ಭಾರಿ ಸಹಿತ ಮಳೆಯಾಗುತಿದೆ. ಸಂಜೆ 7.30ರ ಹೊತ್ತಿಗೆ ವರ್ಷಧಾರೆ ಆರಂಭವಾಗಿದ್ದು, ನಗರದ ರಸ್ತೆಗಳೆಲ್ಲ ನೀರಿನಿಂದ ತುಂಬಿಕೊಂಡಿವೆ.
ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 17ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರನ್ವಯ, ಶಿವಮೊಗ್ಗ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದೆ.
ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗÀುವ ಸಾಧ್ಯತೆಯ ಬಗ್ಗೆ ಹವಾಮಾನ ಇಲಾಖೆಯು ಅಕ್ಟೋಬರ್ 15ರ ವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿತ್ತು. ಆದರೆ, ಸಂಜೆಯ ನಂತರ ಮಳೆ ಶುರುವಾಗಿದೆ.
ಅಂಬು ಛೇದನ ವೀಕ್ಷಿಸಲು ಬಂದವರು ಲಾಕ್
ಸಂಜೆಯವರೆಗೆ ಯಾವುದೇ ಮಳೆಯ ಮುನ್ಸೂಚನೆ ಇರಲಿಲ್ಲ. ಹೀಗಾಗಿ, ದಸರಾ ಹಬ್ಬವನ್ನು ವಿಜೃಂಬಣೆಯಿಂದ ಆಯೋಜಿಸಲಾಗಿದೆ. ಆದರೆ, ಏಕಾಏಕಿ ಮಳೆ ಆರಂಭವಾಗಿದ್ದರಿಂದ ವಿವಿಧ ಕಾರ್ಯಕ್ರಮಗಳಿಗೆ ಅಡ್ಡಿಯಾಗಿದೆ. ಅಂಬು ಛೇದನ ಬಳಿಕ ಮಳೆ ಆರಂಭವಾಗಿದೆ. ಹೀಗಾಗಿ, ಹಳೇ ಜೈಲು ಆವರಣದಲ್ಲಿ ನೆರೆದ ಜನರು ಅಲ್ಲಲ್ಲೇ ಮರ, ಕಟ್ಟಡಗಳ ಅಡಿಯಲ್ಲಿ ಆಶ್ರಯ ಪಡೆದರು.
https://www.suddikanaja.com/2021/08/09/mlc-aynur-manjuanth-angry-on-officials/